<p><strong>ಬೆಳಗಾವಿ:</strong> ‘ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.</p>.<p>ಖ್ಯಾತ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಅ.22ರಂದು ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.</p>.<p>ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಮತ್ತು ಜೀ ಕನ್ನಡ ಸರಿಗಮಪ ತಂಡದವರು ನೃತ್ಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.</p>.<p>ಆಕ್ಸಿಜೆನ್ ಡ್ಯಾನ್ಸ್ ಗ್ರೂಪ್ ವತಿಯಿಂದ ನೃತ್ಯ, ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ, ಪ್ರಕಾಶ್ ಚಂದನ್ನವರ ತಂಡದಿಂದ ಜೋಗತಿ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಫೈರ್ ಶೋ ಹಾಗೂ ಶಾಡೋ ಆ್ಯಕ್ಟ್ ವಿಶೇಷ ಪ್ರದರ್ಶನ ಕೂಡ ಏರ್ಪಡಿಸಲಾಗಿದೆ.</p>.<p>ಎಲ್ಲರಿಗೂ ಉಚಿತ ಪ್ರವೇಶವಿದೆ. ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.</p>.<p>ಖ್ಯಾತ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಅ.22ರಂದು ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.</p>.<p>ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಮತ್ತು ಜೀ ಕನ್ನಡ ಸರಿಗಮಪ ತಂಡದವರು ನೃತ್ಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.</p>.<p>ಆಕ್ಸಿಜೆನ್ ಡ್ಯಾನ್ಸ್ ಗ್ರೂಪ್ ವತಿಯಿಂದ ನೃತ್ಯ, ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ, ಪ್ರಕಾಶ್ ಚಂದನ್ನವರ ತಂಡದಿಂದ ಜೋಗತಿ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಫೈರ್ ಶೋ ಹಾಗೂ ಶಾಡೋ ಆ್ಯಕ್ಟ್ ವಿಶೇಷ ಪ್ರದರ್ಶನ ಕೂಡ ಏರ್ಪಡಿಸಲಾಗಿದೆ.</p>.<p>ಎಲ್ಲರಿಗೂ ಉಚಿತ ಪ್ರವೇಶವಿದೆ. ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>