‘ಮಧುಮೇಹ ಪೀಡಿತ ಮಕ್ಕಳ ಆರೈಕೆಯಲ್ಲಿ ಅತ್ಯಂತ ನಿಗಾ ವಹಿಸುತ್ತಿರುವುದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದೇವೆ. ಮಧುಮೇಹವು ಮಕ್ಕಳಲ್ಲಿ ಸವಾಲಾಗಿ ಪರಿಣಮಿಸಿದ್ದು, ಅದನ್ನು ತಡೆಗಟ್ಟಲು ಕಾರ್ಯಪ್ರವೃತ್ತರಾಗಿದ್ದೇವೆ. ನಮ್ಮ ಕೇಂದ್ರವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾ ಶಿಕ್ಷಣ ನೀಡುತ್ತಿರುವುದು ಅತ್ಯಂತ ಶ್ಲಾಘನೀಯವಾಗಿದೆ’ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ.