<p><strong>ಗೋಕಾಕ</strong>: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೆಎಲ್ಇ ಸಂಸ್ಥೆ ಶ್ರಮಿಸುತ್ತಿದೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು.</p>.<p>ಶನಿವಾರ ಕೆಎಲ್ಇ ಸಂಸ್ಥೆಯ ಇಲ್ಲಿನ ಐಟಿಐನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p> 2004ರಲ್ಲಿ ನಗರದಲ್ಲಿ ಕೆಎಲ್ಇ ಸಂಸ್ಥೆಯಿಂದ ಪ್ರಾರಂಭಿಸಲಾದ ಐಟಿಐ ಕಾಲೇಜು ಹಲವಾರು ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ ಕಲ್ಪಿಸಿ ಈ ಬಾರಿ ಬೆಂಗಳೂರಿನ ಟೊಯಟೊ ಕಿರ್ಲೋಸ್ಕರ್ಕಂಪನಿಗೆ 55 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ಸಂತಸ ತಂದಿದೆ ಎಂದರು.</p>.<p>ಹೆಸ್ಕಾಂನ ಘಟಪ್ರಭಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ನಿರಂಜನಗೌಡ ಮೂಡಲಗಿ ಅವರು ಮಾತನಾಡಿ, ತಾವು ಕಲಿತ ಜ್ಞಾನದ ಸದುಪಯೋಗದಿಂದ ವೃತ್ತಿ ಜೀವನದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸಿ ತಮ್ಮ ಬದುಕನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.</p>.<p>ವೇದಿಕೆಯಲ್ಲಿ ಅರಭಾಂವಿಯ ಜಿಟಿಟಿಸಿ ಪ್ರಾಚಾರ್ಯ ಉಮೇಶ ಬಡಕುಂದ್ರಿ, ಕೆಎಲ್ಇ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಚೇರಮನ್ಮಲ್ಲಿಕಾರ್ಜುನ ಚುನಮರಿ, ಆಡಳಿತಾಧಿಕಾರಿ ಜಿ.ಎಂ.ಅಂದಾನಿ, ಪ್ರಾಚಾರ್ಯ ಮಂಜುನಾಥ ಕಂಬಾರ ಇದ್ದರು. ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ</strong>: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೆಎಲ್ಇ ಸಂಸ್ಥೆ ಶ್ರಮಿಸುತ್ತಿದೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು.</p>.<p>ಶನಿವಾರ ಕೆಎಲ್ಇ ಸಂಸ್ಥೆಯ ಇಲ್ಲಿನ ಐಟಿಐನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p> 2004ರಲ್ಲಿ ನಗರದಲ್ಲಿ ಕೆಎಲ್ಇ ಸಂಸ್ಥೆಯಿಂದ ಪ್ರಾರಂಭಿಸಲಾದ ಐಟಿಐ ಕಾಲೇಜು ಹಲವಾರು ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ ಕಲ್ಪಿಸಿ ಈ ಬಾರಿ ಬೆಂಗಳೂರಿನ ಟೊಯಟೊ ಕಿರ್ಲೋಸ್ಕರ್ಕಂಪನಿಗೆ 55 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ಸಂತಸ ತಂದಿದೆ ಎಂದರು.</p>.<p>ಹೆಸ್ಕಾಂನ ಘಟಪ್ರಭಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ನಿರಂಜನಗೌಡ ಮೂಡಲಗಿ ಅವರು ಮಾತನಾಡಿ, ತಾವು ಕಲಿತ ಜ್ಞಾನದ ಸದುಪಯೋಗದಿಂದ ವೃತ್ತಿ ಜೀವನದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸಿ ತಮ್ಮ ಬದುಕನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.</p>.<p>ವೇದಿಕೆಯಲ್ಲಿ ಅರಭಾಂವಿಯ ಜಿಟಿಟಿಸಿ ಪ್ರಾಚಾರ್ಯ ಉಮೇಶ ಬಡಕುಂದ್ರಿ, ಕೆಎಲ್ಇ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಚೇರಮನ್ಮಲ್ಲಿಕಾರ್ಜುನ ಚುನಮರಿ, ಆಡಳಿತಾಧಿಕಾರಿ ಜಿ.ಎಂ.ಅಂದಾನಿ, ಪ್ರಾಚಾರ್ಯ ಮಂಜುನಾಥ ಕಂಬಾರ ಇದ್ದರು. ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>