‘ಸ್ಥಳೀಯ ಅಗತ್ಯಕ್ಕೆ ಅನುಸಾರವಾಗಿ ಸಂಶೋಧನೆ ಕೈಗೊಳ್ಳಲು ಇನ್ಕ್ಯುಬೇಷನ್ ಕೇಂದ್ರವನ್ನು ಕಾಲೇಜು ಹೊಂದಿದೆ. ಇದರ ಮಾರ್ಗದರ್ಶನದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹತ್ತು ಯೋಜನೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಂಶೋಧನೆ ನಡೆಸಲು ಇದೊಂದು ಮಹತ್ವದ ಮತ್ತು ಹೆಮ್ಮೆಯ ವಿಷಯವಾಗಿದೆ’ ಎಂದುಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ತಿಳಿಸಿದರು.