ಬೆಳಗಾವಿ: ಇಲ್ಲಿನ ಕೆಎಲ್ಎಸ್ ಜಿಐಟಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆನ್ಲೈನ್ ವೇದಿಕೆಯಲ್ಲಿ ಆಚರಿಸಲಾಯಿತು.
‘ಸೌಹಾರ್ದ ಮತ್ತು ಶಾಂತಿಗಾಗಿ ಯೋಗ’ ಶೀರ್ಷಿಕೆಯಲ್ಲಿ ಆಚರಿಸಲಾಯಿತು. ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆಯುಷ್ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಲಾಯಿತು.
ಜಿಐಟಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪಿ.ವಿ. ಕಡಗದಕೈ ಅವರು ಸ್ವತಃ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿ ಯೋಗ ಅಧಿವೇಶನ ತೆಗೆದುಕೊಂಡರು. ಆರೋಗ್ಯಕರ ಜೀವನಕ್ಕೆ ಯೋಗದ ಮಹತ್ವವನ್ನು ವಿವರಿಸಿದರು. ಕ್ಷಮಾ ಕಡಗದಕೈ ಸೂರ್ಯನಮಸ್ಕಾರ ಮತ್ತು ಆಸನಗಳನ್ನು ಪ್ರದರ್ಶಿಸಿದರು. ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.