ಬೆಳಗಾವಿ: ನಿಮ್ಮ ಕೈಮುಗಿದು ಕೇಳುತ್ತೇನೆ. ಸಿ.ಡಿ ವಿಚಾರವಾಗಿ ಯಾವುದೇ ಕಾರಣಕ್ಕೂ ಏನನ್ನೂ ಕೇಳಬೇಡಿ. ಪ್ರತಿ ದಿನ ಅದನ್ನೇ ಹೇಳಿ ಹೇಳಿ ಸಾಕಾಗಿದೆ.
– ಹೀಗೆಂದವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶಾಸಕರಾದ ಎಂ.ಬಿ. ಪಾಟೀಲ ಹಾಗೂ ರಾಮಲಿಂಗಾರೆಡ್ಡಿ ಜೊತೆ ಸಭೆ ನಡೆಸಿದ ಬಳಿಕ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಆ ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪಿಸಿದರೆ ನಾನೇನು ಮಾಡಲಿ? ಆ ಬಗ್ಗೆ ಏನೂ ಕೇಳಬೇಡಿ. ಬೇರೇನಾದರೂ ಕೇಳಿ’ ಎಂದರು.
‘ಕಾನೂನಿದೆ. ಪೊಲೀಸರಿದ್ದಾರೆ. ಯುವತಿಯನ್ನು ರಕ್ಷಣೆ ಮಾಡುವುದು ಪೊಲೀಸರ ಕೆಲಸ’ ಎಂದು ಹೇಳಿದರು.