ವಿನಯ ಕುಲಕರ್ಣಿ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿರುವ ವಿಚಾರದ ಬಗ್ಗೆ ಶನಿವಾರ ಸಂಜೆ ಪ್ರತಿಕ್ರಿಯಿಸಿದ ಅವರು, ‘ಗಾಳಿಯಲ್ಲಿ ಗುಂಡು ಹಾರಿಸಿ ಮಂತ್ರಿಯನ್ನು ಕರೆದುಕೊಂಡು ಬಂದು ಮೆರವಣಿಗೆ ನಡೆಸಿ ಜನಾಶೀರ್ವಾದ ಯಾತ್ರೆಯನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಒಬ್ಬರಿಗೆ ಒಂದು ಕಾನೂನು, ಮತ್ತೊಬ್ಬರಿಗೆ ಇನ್ನೊಂದು ಕಾನೂನೇ? ಎಲ್ಲವನ್ನೂ ಜನರು ನೋಡುತ್ತಿದ್ದಾರೆ’ ಎಂದರು.