ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ದ್ವೇಷ ರಾಜಕಾರಣ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ

Last Updated 21 ಆಗಸ್ಟ್ 2021, 15:25 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿಜೆಪಿಯವರು ಒಂದು ಕಣ್ಣಿಗೆ ಬೆಣ್ಣೆ; ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಅನುಸರಿಸುತ್ತಿದ್ದಾರೆ. ಪಕ್ಷದ ಮುಖಂಡ ವಿನಯ ಕುಲಕರ್ಣಿ ಅವರ ವಿಚಾರದಲ್ಲಿ ದ್ವೇಷದ ರಾಜಕಾರಣ ಮಾಡಿದ್ದಾರೆ’ ಎಂದು ಕೆಪಿಸಿಸಿ ವಕ್ತಾರೆಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು.

ವಿನಯ ಕುಲಕರ್ಣಿ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿರುವ ವಿಚಾರದ ಬಗ್ಗೆ ಶನಿವಾರ ಸಂಜೆ ಪ್ರತಿಕ್ರಿಯಿಸಿದ ಅವರು, ‘ಗಾಳಿಯಲ್ಲಿ ಗುಂಡು ಹಾರಿಸಿ ಮಂತ್ರಿಯನ್ನು ಕರೆದುಕೊಂಡು ಬಂದು ಮೆರವಣಿಗೆ ನಡೆಸಿ ಜನಾಶೀರ್ವಾದ ಯಾತ್ರೆಯನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಒಬ್ಬರಿಗೆ ಒಂದು ಕಾನೂನು, ಮತ್ತೊಬ್ಬರಿಗೆ ಇನ್ನೊಂದು ಕಾನೂನೇ? ಎಲ್ಲವನ್ನೂ ಜನರು ನೋಡುತ್ತಿದ್ದಾರೆ’ ಎಂದರು.

‘ನ್ಯಾಯಾಲಯದಿಂದ ತೀರ್ಪು ನೀಡುವವರೆಗೂ ವಿನಯ ಅವರು ಆರೋಪಿ ಮಾತ್ರ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT