‘ವಿಧಾನಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ನಮ್ಮಲ್ಲಿ ಗೊಂದಲವಿಲ್ಲ. ನಾಯಕರೆಲ್ಲರೂ ಒಮ್ಮತದಿಂದ ಕೆಲಸ ಮಾಡುತ್ತಿದ್ದಾರೆ. ಅಪಸ್ವರ ಇಲ್ಲ. ಇದು ಪಕ್ಷದ ಮೊದಲು ಗೆಲುವು. ಆದರೆ, ಬಿಜೆಪಿಯಲ್ಲಿ ಈ ಪರಿಸ್ಥಿತಿ ಇಲ್ಲ. ಅಲ್ಲಿ ಒಮ್ಮತದ ಅಭ್ಯರ್ಥಿ ಇಲ್ಲ. ಬೆಳಗಾವಿಯಲ್ಲಿ ಬಿಜೆಪಿ ಒಬ್ಬ ಅಭ್ಯರ್ಥಿ ಹಾಕಿದ್ದರೂ, ಏನು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಒಂದೇ ವೇದಿಕೆ, ಅದೆ ಜನ. ಆದರೆ, ಇಬ್ಬರ ಪರ ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ಇಷ್ಟು ದುರ್ಬಲ ಎಂದು ಭಾವಿಸಿರಲಿಲ್ಲ. ಪಕ್ಷ, ಮುಖ್ಯಮಂತ್ರಿ, ಹೈಕಮಾಂಡ್ ಎಲ್ಲವೂ ಅಸಹಾಯಕವಾಗಿದೆ’ ಎಂದು ವ್ಯಂಗ್ಯವಾಡಿದರು.