ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಗುರುವಾರ ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 51ಕ್ಕೆ ಏರಿದೆ.
ಗೋಕಾಕ ತಾಲ್ಲೂಕಿನ ಉಪ್ಪಾರಟ್ಟಿಯ ಹನುಮಂತ ಮಲ್ಲಪ್ಪ ಗುದಿಗೊಪ್ಪ (22) ಬಂಧಿತ. ಈಗಾಗಲೇ ಬಂಧಿತರಾದ ಸಂಜೀವ ಭಂಡಾರಿ, ಬಾಳೇಶ ಕಟ್ಟಿಕಾರ, ಸಿದ್ದಪ್ಪ ಮದಿಹಳ್ಳಿ, ಭೀಮಪ್ಪ ಗುದಿಗೋಪ್ಪ ಅವರೊಂದಿಗೆ ಹನುಮಂತ ಕೂಡ ಸೇರಿದ್ದ. ಇವರೆಲ್ಲರೂ ಕೂಡಿಕೊಂಡು ಏಳು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತಲುಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.