ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಟಿಸಿಎಲ್‌ ನೇಮಕಾತಿ ಅಕ್ರಮ: ಐವರ ಜಾಮೀನು ಅರ್ಜಿ ವಜಾ

Last Updated 3 ಸೆಪ್ಟೆಂಬರ್ 2022, 14:02 IST
ಅಕ್ಷರ ಗಾತ್ರ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಬಂಧಿತರಾದ ಐವರ ಜಾಮೀನು ಅರ್ಜಿಯನ್ನು, ಗೋಕಾಕದ 12ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ.

ಗೋಕಾಕ ತಾಲ್ಲೂಕಿನ ನಾಗನೂರು ಗ್ರಾಮದ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ, ಮಾಲದಿನ್ನಿಯ ಸುನೀಲ ಅಜ್ಜಪ್ಪ ಭಂಗಿ, ಬೆಣಚಿನಮರಡಿಯ ಸಿದ್ಧಪ್ಪ ಕೆಂಚಪ್ಪ ಕೊತ್ತಲ, ವೀರನಗಡ್ಡಿಯ ಸಂತೋಷ ಪ್ರಕಾಶ ಮಾಣಗಾವಿ, ಮಾಲದಿನ್ನಿಯ ರೇಣುಕಾ ವಿಠಲ ಜವಾರಿ ಅವರ ಜಾಮೀನು ಅರ್ಜಿ ಶನಿವಾರ ವಿಚಾರಣೆಗೆ ಬಂದವು.

ಪ್ರಕರಣದ ಪ್ರಮುಖ ಆರೋಪಿ ಸಂಜೀವ ಲಕ್ಷ್ಮಣ ಭಂಡಾರಿ ಸೇರಿದಂತೆ ಈವರೆಗೆ 13 ಮಂದಿಯನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT