<p><strong>ಕಾಗವಾಡ:</strong> ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿದ್ದು, ಉಗಾರ-ಕುಡಚಿ ಮಾರ್ಗ ಮಧ್ಯದ ಸೇತುವೆಯ ಮೇಲೆ 3 ಅಡಿ ನೀರು ಬಂದಿದೆ. ಬುಧವಾರ ಎರಡನೇ ಬಾರಿಗೆ ಸಾರಿಗೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ.<br><br> ಸೇತುವೆ ಮುಳುಗಡೆಯಾಗಿರುವುದು ಹಾಗೂ ನದಿ ನೀರಿನ ಮಟ್ಟ ಏರುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಉಗಾರ ಹಾಗೂ ಕುಡಚಿ ಎರಡೂ ಬದಿಗೆ ಪೊಲೀಸರು ಬ್ಯಾರಿಕೇಡಗಳನ್ನು ಹಾಕಿ ಪೊಲೀಸ್ ಗಸ್ತು ನೇಮಿಸಿದ್ದಾರೆ.</p>.<p><br><br>ಮಾರ್ಗ ಕಡಿತದಿಂದಾಗಿ ಬಾಗಲಕೋಟೆ, ಜಮಖಂಡಿ, ಮುಧೋಳ, ಮಹಾಲಿಂಗಪೂರ, ಹಾರೂಗೇರಿಗೆ ತೆರಳುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ. ಇದಕ್ಕೆ ಪರ್ಯಾಯವಾಗಿ, ಹಾರೂಗೇರಿ ಕ್ರಾಸ್ ಮಾರ್ಗವಾಗಿ ಅಥಣಿ, ಕಾಗವಾಡ, ಮಾರ್ಗವಾಗಿ 50 ಕಿ.ಮೀ ಹೆಚ್ಚಿಗೆ ಕ್ರಮಿಸಿ ತೆರಳುವ ಪರಿಸ್ಥಿತಿ ಬಂದಿದೆ.</p>.<p>ಹಲವೆಡೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಪರಿಣಾಮ ರೈತರು ಬೆಳೆದ ಮೆಕ್ಕೆಜೋಳ, ಉದ್ದು, ಸೇರಿದಂತೆ ಇನ್ನಿತರ ಬೆಳೆಗಳು ಹಾಳಾಗಿದೆ. ರೈತರಿಗೆ ದಿಕ್ಕು ತೋಚದೆ ಕಂಗಾಲಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಗವಾಡ:</strong> ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿದ್ದು, ಉಗಾರ-ಕುಡಚಿ ಮಾರ್ಗ ಮಧ್ಯದ ಸೇತುವೆಯ ಮೇಲೆ 3 ಅಡಿ ನೀರು ಬಂದಿದೆ. ಬುಧವಾರ ಎರಡನೇ ಬಾರಿಗೆ ಸಾರಿಗೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ.<br><br> ಸೇತುವೆ ಮುಳುಗಡೆಯಾಗಿರುವುದು ಹಾಗೂ ನದಿ ನೀರಿನ ಮಟ್ಟ ಏರುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಉಗಾರ ಹಾಗೂ ಕುಡಚಿ ಎರಡೂ ಬದಿಗೆ ಪೊಲೀಸರು ಬ್ಯಾರಿಕೇಡಗಳನ್ನು ಹಾಕಿ ಪೊಲೀಸ್ ಗಸ್ತು ನೇಮಿಸಿದ್ದಾರೆ.</p>.<p><br><br>ಮಾರ್ಗ ಕಡಿತದಿಂದಾಗಿ ಬಾಗಲಕೋಟೆ, ಜಮಖಂಡಿ, ಮುಧೋಳ, ಮಹಾಲಿಂಗಪೂರ, ಹಾರೂಗೇರಿಗೆ ತೆರಳುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ. ಇದಕ್ಕೆ ಪರ್ಯಾಯವಾಗಿ, ಹಾರೂಗೇರಿ ಕ್ರಾಸ್ ಮಾರ್ಗವಾಗಿ ಅಥಣಿ, ಕಾಗವಾಡ, ಮಾರ್ಗವಾಗಿ 50 ಕಿ.ಮೀ ಹೆಚ್ಚಿಗೆ ಕ್ರಮಿಸಿ ತೆರಳುವ ಪರಿಸ್ಥಿತಿ ಬಂದಿದೆ.</p>.<p>ಹಲವೆಡೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಪರಿಣಾಮ ರೈತರು ಬೆಳೆದ ಮೆಕ್ಕೆಜೋಳ, ಉದ್ದು, ಸೇರಿದಂತೆ ಇನ್ನಿತರ ಬೆಳೆಗಳು ಹಾಳಾಗಿದೆ. ರೈತರಿಗೆ ದಿಕ್ಕು ತೋಚದೆ ಕಂಗಾಲಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>