<p><strong>ಚಿಕ್ಕೋಡಿ</strong>: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ಹಾಗೂ ಉಪನದಿಗಳು ಪಾತ್ರ ಮೀರಿ ಹರಿಯುತ್ತಿವೆ.</p>.<p>ಮಹಾರಾಷ್ಟ್ರದ ಕೊಂಕಣ ಪ್ರದೇಶ ವ್ಯಾಪ್ತಿಯ ಕೊಯ್ನಾದಲ್ಲಿ 19.2 ಸೆಂ.ಮೀ, ವಾರಣಾದಲ್ಲಿ 9.2 ಸೆಂ.ಮೀ, ಕಾಳಮ್ಮವಾಡಿಯಲ್ಲಿ 11.9 ಸೆಂ.ಮೀ, ಮಹಾಬಳೇಶ್ವರದಲ್ಲಿ 15.1 ಸೆಂ.ಮೀ, ನವಜಾದಲ್ಲಿ 31.6 ಸೆಂ.ಮೀ, ರಾಧಾನಗರಿಯಲ್ಲಿ 22.1 ಸೆಂ.ಮೀ ಹಾಗೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಚಿಕ್ಕೋಡಿಯಲ್ಲಿ 4.5 ಸೆಂ.ಮೀ, ಅಂಕಲಿಯಲ್ಲಿ 1.6 ಸೆಂ.ಮೀ, ನಾಗಮುನ್ನೋಳಿಯಲ್ಲಿ 2.6 ಸೆಂ.ಮೀ, ಸದಲಗಾದಲ್ಲಿ 6 ಸೆಂ.ಮೀ ಮಳೆ ಮಂಗಳವಾರ ದಾಖಲಾಗಿದೆ.</p>.<p>ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜ್ ನಿಂದ ಕೃಷ್ಣಾ ನದಿಗೆ 86,750 ಕ್ಯೂಸೆಕ್ ಹೊರ ಹರಿವು ಇದ್ದು, ಸದಲಗಾ ಪಟ್ಟಣದ ಬಳಿಯಲ್ಲಿ ದೂಧಗಂಗಾ ನದಿಗೆ 26,400 ಕ್ಯೂಸೆಕ್ ಹೊರ ಹರಿವು ಇದೆ. ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 1,13,150 ಕ್ಯೂಸೆಕ್ ಹೊರ ಹರಿವು ಇದೆ.</p>.<p>105 ಅಡಿ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಆಣೆಕಟ್ಟೆಯಲ್ಲಿ 99 ಟಿಎಂಸಿ ಅಡಿಯಷ್ಟು ನೀರು ಭರ್ತಿಯಾಗಿದೆ. ಹೀಗಾಗಿ ಕೊಯ್ನಾ ಆಣೆಕಟ್ಟೆಯಿಂದ ಮಂಗಳವಾರ ಸಂಜೆ 6 ಗಂಟೆಗೆ 6 ಗೇಟುಗಳನ್ನು 11 ರಿಂದ 12 ಅಡಿ ತೆರೆದು 89,100 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.</p>.<p>ಉಪ ವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಕಲ್ಲೋಳ-ಯಡೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಭೋಜ-ಕುನ್ನೂರ, ಬಾರವಾಡ-ಕುನ್ನೂರ, ಹುನ್ನುರಗಿ-ಮಮದಾಪೂರ, ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ ಸೇರಿದಂತೆ 8 ಕಿರು ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಪರಸ್ಪರ ಗ್ರಾಮಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಸುತ್ತು ಬಳಸಿಕೊಂಡು ತಲುಪಬಹುದಾಗಿದೆ.</p>.<p>ಉಪ ವಿಭಾಗದಲ್ಲಿ ಕೃಷ್ಣಾ ಹಾಗೂ ಉಪನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮವಾಗಿ ಕಲ್ಲೋಳ ಬಳಿಯಲ್ಲಿ ದತ್ತ ಮಂದಿರ, ಯಕ್ಸಂಬಾ ಪಟ್ಟಣದ ಹೊರವಲಯದ ಮುಲ್ಲಾನ್ಕಿ ಪ್ರದೇಶದ ದರ್ಗಾ, ಕಾರದಗಾ ಬಳಿಯ ಬಂಗಾಲಿಬಾಬಾ ದೇವಸ್ಥಾನ ಜಲಾವೃತಗೊಂಡಿವೆ.</p>.<p>ಉಪ ವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳ ನೀರು ಪಾತ್ರ ಮೀರಿ ಹರಿದು ಹೊಲ ಗದ್ದೆಗಳಿಗೆ ನುಗ್ಗಿದ್ದು, ಕಬ್ಬು, ಸೋಯಾಬಿನ್, ಬಾಳೆ, ಶೇಂಗಾ, ಅವರೆ, ತರಕಾರಿ ಮುಂತಾದ ಬೆಳೆ ನೀರಿನಲ್ಲಿ ನಿಂತಿವೆ. ಚಿಕ್ಕೋಡಿ ಉಪ ವಿಭಾಗದಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ಹಾಗೂ ಉಪನದಿಗಳು ಪಾತ್ರ ಮೀರಿ ಹರಿಯುತ್ತಿವೆ.</p>.<p>ಮಹಾರಾಷ್ಟ್ರದ ಕೊಂಕಣ ಪ್ರದೇಶ ವ್ಯಾಪ್ತಿಯ ಕೊಯ್ನಾದಲ್ಲಿ 19.2 ಸೆಂ.ಮೀ, ವಾರಣಾದಲ್ಲಿ 9.2 ಸೆಂ.ಮೀ, ಕಾಳಮ್ಮವಾಡಿಯಲ್ಲಿ 11.9 ಸೆಂ.ಮೀ, ಮಹಾಬಳೇಶ್ವರದಲ್ಲಿ 15.1 ಸೆಂ.ಮೀ, ನವಜಾದಲ್ಲಿ 31.6 ಸೆಂ.ಮೀ, ರಾಧಾನಗರಿಯಲ್ಲಿ 22.1 ಸೆಂ.ಮೀ ಹಾಗೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಚಿಕ್ಕೋಡಿಯಲ್ಲಿ 4.5 ಸೆಂ.ಮೀ, ಅಂಕಲಿಯಲ್ಲಿ 1.6 ಸೆಂ.ಮೀ, ನಾಗಮುನ್ನೋಳಿಯಲ್ಲಿ 2.6 ಸೆಂ.ಮೀ, ಸದಲಗಾದಲ್ಲಿ 6 ಸೆಂ.ಮೀ ಮಳೆ ಮಂಗಳವಾರ ದಾಖಲಾಗಿದೆ.</p>.<p>ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜ್ ನಿಂದ ಕೃಷ್ಣಾ ನದಿಗೆ 86,750 ಕ್ಯೂಸೆಕ್ ಹೊರ ಹರಿವು ಇದ್ದು, ಸದಲಗಾ ಪಟ್ಟಣದ ಬಳಿಯಲ್ಲಿ ದೂಧಗಂಗಾ ನದಿಗೆ 26,400 ಕ್ಯೂಸೆಕ್ ಹೊರ ಹರಿವು ಇದೆ. ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 1,13,150 ಕ್ಯೂಸೆಕ್ ಹೊರ ಹರಿವು ಇದೆ.</p>.<p>105 ಅಡಿ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಆಣೆಕಟ್ಟೆಯಲ್ಲಿ 99 ಟಿಎಂಸಿ ಅಡಿಯಷ್ಟು ನೀರು ಭರ್ತಿಯಾಗಿದೆ. ಹೀಗಾಗಿ ಕೊಯ್ನಾ ಆಣೆಕಟ್ಟೆಯಿಂದ ಮಂಗಳವಾರ ಸಂಜೆ 6 ಗಂಟೆಗೆ 6 ಗೇಟುಗಳನ್ನು 11 ರಿಂದ 12 ಅಡಿ ತೆರೆದು 89,100 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.</p>.<p>ಉಪ ವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಕಲ್ಲೋಳ-ಯಡೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಭೋಜ-ಕುನ್ನೂರ, ಬಾರವಾಡ-ಕುನ್ನೂರ, ಹುನ್ನುರಗಿ-ಮಮದಾಪೂರ, ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ ಸೇರಿದಂತೆ 8 ಕಿರು ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಪರಸ್ಪರ ಗ್ರಾಮಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಸುತ್ತು ಬಳಸಿಕೊಂಡು ತಲುಪಬಹುದಾಗಿದೆ.</p>.<p>ಉಪ ವಿಭಾಗದಲ್ಲಿ ಕೃಷ್ಣಾ ಹಾಗೂ ಉಪನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮವಾಗಿ ಕಲ್ಲೋಳ ಬಳಿಯಲ್ಲಿ ದತ್ತ ಮಂದಿರ, ಯಕ್ಸಂಬಾ ಪಟ್ಟಣದ ಹೊರವಲಯದ ಮುಲ್ಲಾನ್ಕಿ ಪ್ರದೇಶದ ದರ್ಗಾ, ಕಾರದಗಾ ಬಳಿಯ ಬಂಗಾಲಿಬಾಬಾ ದೇವಸ್ಥಾನ ಜಲಾವೃತಗೊಂಡಿವೆ.</p>.<p>ಉಪ ವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳ ನೀರು ಪಾತ್ರ ಮೀರಿ ಹರಿದು ಹೊಲ ಗದ್ದೆಗಳಿಗೆ ನುಗ್ಗಿದ್ದು, ಕಬ್ಬು, ಸೋಯಾಬಿನ್, ಬಾಳೆ, ಶೇಂಗಾ, ಅವರೆ, ತರಕಾರಿ ಮುಂತಾದ ಬೆಳೆ ನೀರಿನಲ್ಲಿ ನಿಂತಿವೆ. ಚಿಕ್ಕೋಡಿ ಉಪ ವಿಭಾಗದಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>