ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ- ಯಡೂರ, ಮಾಂಜರಿ- ಬಾವಾನ ಸೌಂದತ್ತಿ, ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲ್ಲೂಕಿನ ಬೂದಿಹಾಳ- ಕೊಡ್ನಿ, ಮಾಂಗೂರ-ಕುನ್ನೂರ, ಕುನ್ನೂರ- ಬಾರವಾಡ, ಭೋಜವಾಡಿ- ಶಿವಾಪುರವಾಡಿ, ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ ಮತ್ತು ಕಾರದಗಾ- ಭೋಜ ಗ್ರಾಮಗಳ ಮಧ್ಯೆ ಇರುವ ಕೆಳಮಟ್ಟದ ಸೇತುವೆಗಳು ಜಲಾವೃತಗೊಂಡಿವೆ. ವಾಹನ ಮತ್ತು ಜನ ಸಂಚಾರಕ್ಕೆ ಪರ್ಯಾಯ ಮಾರ್ಗಗಳಿವೆ.