‘ಕುಂಬಾರರಾದ ನಾವು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದೇವೆ. ಮಡಿಕೆ ಹಾಗೂ ಕುಡಿಕೆಗಳ ಮಾರುಕಟ್ಟೆಗಾಗಿ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅವಕಾಶವಿಲ್ಲದೆ, ನಮ್ಮ ಜೀವನಮಟ್ಟ ಕೆಳಮಟ್ಟದಲ್ಲಿದೆ. ಹೀಗಾಗಿ, ನಮ್ಮನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.