ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಯಾಗಿದ್ದ ಅಥಣಿ ಬದಲಾದ ರಾಜಕೀಯ ಬೆಳವಣಿಗೆಯಿಂದಾಗಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತರರ ಪ್ರಾಬಲ್ಯ ಹೆಚ್ಚು. ಸುಮಾರು 52 ಸಾವಿರ ಲಿಂಗಾಯತ ಮತದಾರರಿದ್ದು ಅವರೇ ನಿರ್ಣಾಯಕ ಪಾತ್ರ ಹೊಂದಿದ್ದಾರೆ. ನಂತರದ ಸ್ಥಾನದಲ್ಲಿ ಪರಿಶಿಷ್ಟರು, ಕುರುಬರು, ಮಾಳಿ ಹಾಗೂ ಮುಸ್ಲಿಂ ಮತದಾರರು ಇದ್ದಾರೆ. ಈ ಬಾರಿಯೂ ಲಕ್ಷ್ಮಣ ಸವದಿ ಹಾಗೂ ಮಹೇಶ್ ಕುಮಠಹಳ್ಳಿ ನಡುವೆ ನೇರಾನೇರಾ ಫೈಟ್ ಎದುರಾಗುವ ಸಾದ್ಯತೆ ಇದೆ.