ರಾಷ್ಟ್ರ ಮಟ್ಟದಲ್ಲಿ ಜೈನ ಪತ್ರಕರ್ತರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿರುವ ಸಂಘ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದೆ. ಉತ್ತರ ಭಾರತದ ರಾಜ್ಯಗಳ ಜೊತೆಗೆ ಕರ್ನಾಟಕದಲ್ಲೂ ಸೇವೆ ನೀಡಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ನಡೆದ ಸಭೆಯಲ್ಲಿ ಕುಂತಿನಾಥ ಅವರನ್ನು ನೇಮಿಸಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ರಮೇಶ ಜೈನ ತಿಜಾರಿಯಾ ಹಾಗೂ ರಾಷ್ಟ್ರೀಯ ಮಹಾಮಂತ್ರಿ ಉದಯಬಾನ ಜೈನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.