<p><strong>ರಾಮದುರ್ಗ</strong>: ತಾಲ್ಲೂಕಿನ ಇಡಗಲ್ನಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಶೌಚಕ್ಕಾಗಿ ಬಹುತೇಕರು ಬಯಲಿನತ್ತಲೇ ಮುಖಮಾಡುತ್ತಾರೆ. ‘ಊರಲ್ಲಿ ನೈರ್ಮಲ್ಯಕ್ಕೆ ಒತ್ತು ನೀಡಬೇಕು’ ಎನ್ನುವ ಸರ್ಕಾರದ ಆದೇಶ ಗಾಳಿಗೆ ತೂರಲಾಗಿದೆ.</p>.<p>ಗ್ರಾಮ ಪ್ರವೇಶಿಸುವ ಮುನ್ನವೇ, 20ರಿಂದ 25 ಸಾಮೂಹಿಕ ಶೌಚಗೃಹ ನಿರ್ಮಿಸಲಾಗಿದೆ. ಆದರೆ, ಅವು ಬಳಕೆಯಾಗದೆ ಪಾಳು ಬಿದ್ದಿವೆ. ಜನರು ಮುಖ್ಯರಸ್ತೆ ಬದಿಯೇ ಶೌಚಕ್ಕೆ ಹೋಗುತ್ತಿರುವುದರಿಂದ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ ಜನರು ಮೂಗಿಗೆ ಕರವಸ್ತ್ರ ಕಟ್ಟಿಕೊಂಡೇ ಊರು ಪ್ರವೇಶಿಸುವ ಸ್ಥಿತಿ ನಿರ್ಮಾಣವಾಗಿದೆ.</p>.<p>‘ಹಲವು ವರ್ಷಗಳ ಹಿಂದೆ ನಿರ್ಮಿಸಿದ ಸಾರ್ವಜನಿಕ ಶೌಚಗೃಹಗಳನ್ನು ಬಳಸಲು ಗ್ರಾಮ ಪಂಚಾಯ್ತಿಯವರು ಈವರೆಗೆ ಅನುಮತಿ ಕೊಟ್ಟಿಲ್ಲ. ಕೇಳಿದರೆ ಸಣ್ಣ–ಪುಟ್ಟ ನೆಪ ಹೇಳಿ ದಿನದೂಡುತ್ತಿದ್ದಾರೆ’ ಎಂಬ ಆರೋಪ ಸಾರ್ವಜನಿಕರದ್ದು.</p>.<p><strong>ಅಂತ್ಯಸಂಸ್ಕಾರಕ್ಕೆ ತೊಂದರೆ:</strong> ಗ್ರಾಮದಲ್ಲಿನ ಸ್ಮಶಾನಭೂಮಿ ಅವ್ಯವಸ್ಥೆಯ ಆಗರವಾಗಿದ್ದು, ಹೇರಳವಾಗಿ ಗಿಡಗಂಟಿ ಬೆಳೆದಿವೆ. ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಹದಗೆಟ್ಟಿದೆ. ಹಾಗಾಗಿ ಅಂತ್ಯಕ್ರಿಯೆಗಾಗಿ ಹೋಗುವವರು ಪರದಾಡುವಂತಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ.</p>.<p>ಊರಲ್ಲಿ ಹರಿದುಬರುವ ಚರಂಡಿ ನೀರನ್ನು ಹಿಡಿದಿಡಲು ಒಂದು ಇಂಗು ಗುಂಡಿ ನಿರ್ಮಿಸಲಾಗಿದೆ. ಆದರೆ, ಅದು ಒಂದು ದಿನದ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನೂ ಹೊಂದಿಲ್ಲ. ಹೆಚ್ಚಿನ ನೀರು ಸ್ಮಶಾನದ ತುಂಬೆಲ್ಲ ಹರಡುತ್ತಿದೆ.</p>.<p>ಒಳರಸ್ತೆಗಳು ನಿರ್ಮಾಣವಾಗದ್ದರಿಂದ ಮೋರಿ ನೀರು ಮಣ್ಣಿನ ರಸ್ತೆ ತುಂಬೆಲ್ಲ ಹರಿಯುತ್ತಿದೆ. ಜಲಜೀವನ ಮಿಷನ್ ಯೋಜನೆ ಕಾಮಗಾರಿಗಾಗಿ ಗುತ್ತಿಗೆದಾರರು ಎಲ್ಲೆಂದರಲ್ಲಿ ರಸ್ತೆ ಅಗೆದಿದ್ದಾರೆ. ಇದರಿಂದ ರಸ್ತೆ ಕೆಸರುಮಯವಾಗಿ ಮಾರ್ಪಡುತ್ತಿದ್ದು, ಜನರ ಸಂಚಾರಕ್ಕೆ ತೊಡಕಾಗಿದೆ.</p>.<p>ಶುದ್ಧ ಕುಡಿಯುವ ನೀರಿನ ಘಟಕವೂ ನಿರುಪಯುಕ್ತವಾಗಿದೆ. ಒಂದೇಒಂದು ಮೂತ್ರಾಲಯವೂ ಇಲ್ಲದ್ದರಿಂದ ಜನರು ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಅಲ್ಲಲ್ಲಿ ಮಲಿನ ನೀರು ನಿಲ್ಲುತ್ತಿದ್ದು, ಸೊಳ್ಳೆಗಳ ಕಾಟ ವಿಪರೀತವಾಗಿದೆ. ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಸ್ಥಳೀಯರನ್ನು ಕಾಡುತ್ತಿದೆ.</p>.<div><blockquote>ನಮ್ಮೂರಿನಲ್ಲಿ ಗ್ರಾಮ ಪಂಚಾಯ್ತಿ ಇದ್ದೂ ಇಲ್ಲದಂತಾಗಿದೆ. ಅಭಿವೃದ್ಧಿ ಕೆಲಸ ಕಳಪೆಯಾಗಿವೆ. ಪಂಚಾಯ್ತಿಯವರು ಸಮಸ್ಯೆಗೆ ಸ್ಪಂದಿಸುತ್ತಿಲ್ಲ </blockquote><span class="attribution">–ಶಿವಾನಂದ ಬರದೇಲಿ ಗ್ರಾಮಸ್ಥ</span></div>.<div><blockquote>ಗ್ರಾಮಸ್ಥರ ಬೇಡಿಕೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಶುಚಿತ್ವಕ್ಕೆ ಆದ್ಯತೆ ನೀಡಲಾಗುವುದು</blockquote><span class="attribution">– ಆರ್.ವಿ.ಅಂಗಡಿ ಪಿಡಿಒ ಇಡಗಲ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ</strong>: ತಾಲ್ಲೂಕಿನ ಇಡಗಲ್ನಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಶೌಚಕ್ಕಾಗಿ ಬಹುತೇಕರು ಬಯಲಿನತ್ತಲೇ ಮುಖಮಾಡುತ್ತಾರೆ. ‘ಊರಲ್ಲಿ ನೈರ್ಮಲ್ಯಕ್ಕೆ ಒತ್ತು ನೀಡಬೇಕು’ ಎನ್ನುವ ಸರ್ಕಾರದ ಆದೇಶ ಗಾಳಿಗೆ ತೂರಲಾಗಿದೆ.</p>.<p>ಗ್ರಾಮ ಪ್ರವೇಶಿಸುವ ಮುನ್ನವೇ, 20ರಿಂದ 25 ಸಾಮೂಹಿಕ ಶೌಚಗೃಹ ನಿರ್ಮಿಸಲಾಗಿದೆ. ಆದರೆ, ಅವು ಬಳಕೆಯಾಗದೆ ಪಾಳು ಬಿದ್ದಿವೆ. ಜನರು ಮುಖ್ಯರಸ್ತೆ ಬದಿಯೇ ಶೌಚಕ್ಕೆ ಹೋಗುತ್ತಿರುವುದರಿಂದ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ ಜನರು ಮೂಗಿಗೆ ಕರವಸ್ತ್ರ ಕಟ್ಟಿಕೊಂಡೇ ಊರು ಪ್ರವೇಶಿಸುವ ಸ್ಥಿತಿ ನಿರ್ಮಾಣವಾಗಿದೆ.</p>.<p>‘ಹಲವು ವರ್ಷಗಳ ಹಿಂದೆ ನಿರ್ಮಿಸಿದ ಸಾರ್ವಜನಿಕ ಶೌಚಗೃಹಗಳನ್ನು ಬಳಸಲು ಗ್ರಾಮ ಪಂಚಾಯ್ತಿಯವರು ಈವರೆಗೆ ಅನುಮತಿ ಕೊಟ್ಟಿಲ್ಲ. ಕೇಳಿದರೆ ಸಣ್ಣ–ಪುಟ್ಟ ನೆಪ ಹೇಳಿ ದಿನದೂಡುತ್ತಿದ್ದಾರೆ’ ಎಂಬ ಆರೋಪ ಸಾರ್ವಜನಿಕರದ್ದು.</p>.<p><strong>ಅಂತ್ಯಸಂಸ್ಕಾರಕ್ಕೆ ತೊಂದರೆ:</strong> ಗ್ರಾಮದಲ್ಲಿನ ಸ್ಮಶಾನಭೂಮಿ ಅವ್ಯವಸ್ಥೆಯ ಆಗರವಾಗಿದ್ದು, ಹೇರಳವಾಗಿ ಗಿಡಗಂಟಿ ಬೆಳೆದಿವೆ. ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಹದಗೆಟ್ಟಿದೆ. ಹಾಗಾಗಿ ಅಂತ್ಯಕ್ರಿಯೆಗಾಗಿ ಹೋಗುವವರು ಪರದಾಡುವಂತಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ.</p>.<p>ಊರಲ್ಲಿ ಹರಿದುಬರುವ ಚರಂಡಿ ನೀರನ್ನು ಹಿಡಿದಿಡಲು ಒಂದು ಇಂಗು ಗುಂಡಿ ನಿರ್ಮಿಸಲಾಗಿದೆ. ಆದರೆ, ಅದು ಒಂದು ದಿನದ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನೂ ಹೊಂದಿಲ್ಲ. ಹೆಚ್ಚಿನ ನೀರು ಸ್ಮಶಾನದ ತುಂಬೆಲ್ಲ ಹರಡುತ್ತಿದೆ.</p>.<p>ಒಳರಸ್ತೆಗಳು ನಿರ್ಮಾಣವಾಗದ್ದರಿಂದ ಮೋರಿ ನೀರು ಮಣ್ಣಿನ ರಸ್ತೆ ತುಂಬೆಲ್ಲ ಹರಿಯುತ್ತಿದೆ. ಜಲಜೀವನ ಮಿಷನ್ ಯೋಜನೆ ಕಾಮಗಾರಿಗಾಗಿ ಗುತ್ತಿಗೆದಾರರು ಎಲ್ಲೆಂದರಲ್ಲಿ ರಸ್ತೆ ಅಗೆದಿದ್ದಾರೆ. ಇದರಿಂದ ರಸ್ತೆ ಕೆಸರುಮಯವಾಗಿ ಮಾರ್ಪಡುತ್ತಿದ್ದು, ಜನರ ಸಂಚಾರಕ್ಕೆ ತೊಡಕಾಗಿದೆ.</p>.<p>ಶುದ್ಧ ಕುಡಿಯುವ ನೀರಿನ ಘಟಕವೂ ನಿರುಪಯುಕ್ತವಾಗಿದೆ. ಒಂದೇಒಂದು ಮೂತ್ರಾಲಯವೂ ಇಲ್ಲದ್ದರಿಂದ ಜನರು ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಅಲ್ಲಲ್ಲಿ ಮಲಿನ ನೀರು ನಿಲ್ಲುತ್ತಿದ್ದು, ಸೊಳ್ಳೆಗಳ ಕಾಟ ವಿಪರೀತವಾಗಿದೆ. ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಸ್ಥಳೀಯರನ್ನು ಕಾಡುತ್ತಿದೆ.</p>.<div><blockquote>ನಮ್ಮೂರಿನಲ್ಲಿ ಗ್ರಾಮ ಪಂಚಾಯ್ತಿ ಇದ್ದೂ ಇಲ್ಲದಂತಾಗಿದೆ. ಅಭಿವೃದ್ಧಿ ಕೆಲಸ ಕಳಪೆಯಾಗಿವೆ. ಪಂಚಾಯ್ತಿಯವರು ಸಮಸ್ಯೆಗೆ ಸ್ಪಂದಿಸುತ್ತಿಲ್ಲ </blockquote><span class="attribution">–ಶಿವಾನಂದ ಬರದೇಲಿ ಗ್ರಾಮಸ್ಥ</span></div>.<div><blockquote>ಗ್ರಾಮಸ್ಥರ ಬೇಡಿಕೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಶುಚಿತ್ವಕ್ಕೆ ಆದ್ಯತೆ ನೀಡಲಾಗುವುದು</blockquote><span class="attribution">– ಆರ್.ವಿ.ಅಂಗಡಿ ಪಿಡಿಒ ಇಡಗಲ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>