<p><strong>ಬೆಳಗಾವಿ: ‘</strong>ಗ್ರಾಮ ಪಂಚಾಯಿತಿಗಳ ಬಲವರ್ಧನೆಗಾಗಿ ನಾನು ಯಾವುದೇ ಪಕ್ಷ ಸೇರದೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ. ಪ್ರಥಮ ಪ್ರಾಶಸ್ತ್ಯದ ಮತ ನೀಡಿ ನನ್ನನ್ನು ಆಯ್ಕೆ ಮಾಡಬೇಕು’ ಎಂದು ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಕೋರಿದರು.</p>.<p>ಜಿಲ್ಲೆಯ ಅಥಣಿ ಹೊರವಲಯದಲ್ಲಿ ಗುರುವಾರ ನಡೆದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅಥಣಿ ಭಾಗದೊಂದಿಗೆ ನಿರಂತರ ಸಂಪರ್ಕವಿದೆ. ಎಲ್ಲ ಸಮಾಜವರೊಂದಿಗೆ ಸಹೋದರತ್ವ ಭಾವನೆಯಿಂದ ನಡೆದುಕೊಳ್ಳುತ್ತಿದ್ದೇವೆ. ಏನೇ ಸಮಸ್ಯೆಗಳಿದ್ದರೂ ಅವುಗಳನ್ನು ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇವೆ. ಅಥಣಿ ತಾಲ್ಲೂಕಿನ ಜನರ ಪ್ರೀತಿ–ವಿಶ್ವಾಸಕ್ಕೆ ಎಂದಿಗೂ ಚ್ಯುತಿ ತರುವುದಿಲ್ಲ’ ಎಂದರು.</p>.<p>‘ಯಾವುದೇ ಪಕ್ಷ ಸೇರಿದರೆ ಅಲ್ಲಿನ ತತ್ವ– ಸಿದ್ಧಾಂತಗಳನ್ನು ಒಪ್ಪಿಕೊಂಡು ಕೆಲಸ ಮಾಡಬೇಕಾಗುತ್ತದೆ. ಅದು ನನಗೆ ಬೇಡ’ ಎಂದು ಹೇಳಿದರು.</p>.<p>ಉದ್ಯಮಿ ಉತ್ತಮ ಪಾಟೀಲ, ಮುಖಂಡರಾದ ಸುರೇಶ ಮಾಯನ್ನವರ, ಸಿದ್ದಪ್ಪ ಮುದಕನ್ನವರ, ಮುಖಂಡರಾದ ನಿಂಗಪ್ಪ ನಂದೇಶ್ವರ, ರಾವಸಾಬ ಬೇವನೂರ, ಅಮೂಲ ನಾಯ್ಕ, ಎ.ಸಿ. ಪಾಟೀಲ, ರಾಮಗೌಡ ಗುಮತಾಜ್, ಬಸು ಯಡೂರ, ರಮೇಶ ಪಾಟೀಲ, ರವೀಂದ್ರ ಕಡಕೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ಗ್ರಾಮ ಪಂಚಾಯಿತಿಗಳ ಬಲವರ್ಧನೆಗಾಗಿ ನಾನು ಯಾವುದೇ ಪಕ್ಷ ಸೇರದೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ. ಪ್ರಥಮ ಪ್ರಾಶಸ್ತ್ಯದ ಮತ ನೀಡಿ ನನ್ನನ್ನು ಆಯ್ಕೆ ಮಾಡಬೇಕು’ ಎಂದು ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಕೋರಿದರು.</p>.<p>ಜಿಲ್ಲೆಯ ಅಥಣಿ ಹೊರವಲಯದಲ್ಲಿ ಗುರುವಾರ ನಡೆದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅಥಣಿ ಭಾಗದೊಂದಿಗೆ ನಿರಂತರ ಸಂಪರ್ಕವಿದೆ. ಎಲ್ಲ ಸಮಾಜವರೊಂದಿಗೆ ಸಹೋದರತ್ವ ಭಾವನೆಯಿಂದ ನಡೆದುಕೊಳ್ಳುತ್ತಿದ್ದೇವೆ. ಏನೇ ಸಮಸ್ಯೆಗಳಿದ್ದರೂ ಅವುಗಳನ್ನು ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇವೆ. ಅಥಣಿ ತಾಲ್ಲೂಕಿನ ಜನರ ಪ್ರೀತಿ–ವಿಶ್ವಾಸಕ್ಕೆ ಎಂದಿಗೂ ಚ್ಯುತಿ ತರುವುದಿಲ್ಲ’ ಎಂದರು.</p>.<p>‘ಯಾವುದೇ ಪಕ್ಷ ಸೇರಿದರೆ ಅಲ್ಲಿನ ತತ್ವ– ಸಿದ್ಧಾಂತಗಳನ್ನು ಒಪ್ಪಿಕೊಂಡು ಕೆಲಸ ಮಾಡಬೇಕಾಗುತ್ತದೆ. ಅದು ನನಗೆ ಬೇಡ’ ಎಂದು ಹೇಳಿದರು.</p>.<p>ಉದ್ಯಮಿ ಉತ್ತಮ ಪಾಟೀಲ, ಮುಖಂಡರಾದ ಸುರೇಶ ಮಾಯನ್ನವರ, ಸಿದ್ದಪ್ಪ ಮುದಕನ್ನವರ, ಮುಖಂಡರಾದ ನಿಂಗಪ್ಪ ನಂದೇಶ್ವರ, ರಾವಸಾಬ ಬೇವನೂರ, ಅಮೂಲ ನಾಯ್ಕ, ಎ.ಸಿ. ಪಾಟೀಲ, ರಾಮಗೌಡ ಗುಮತಾಜ್, ಬಸು ಯಡೂರ, ರಮೇಶ ಪಾಟೀಲ, ರವೀಂದ್ರ ಕಡಕೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>