ಅಮಿತ್ ಶಾ ಕಾರ್ಯಕ್ರಮ:‘ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಜ. 16ರಂದು ಬೆಂಗಳೂರಿಗೆ ಬಂದು ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಭದ್ರಾವತಿಗೆ ಹೋಗಿ ಬೆಂಗಳೂರಿಗೆ ಮರಳಿ ವಾಸ್ತವ್ಯ ಹೂಡುವರು. ಜ.17ರಂದು ಬೆಳಿಗ್ಗೆ 10.30ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣಕ್ಕೆ ಬಂದು, ಅಲ್ಲಿಂದ ಹೆಲಿಕಾಪ್ಟರ್ನಲ್ಲಿ ಬಾಗಲಕೋಟೆಗೆ ತೆರಳುವರು. ಮಧ್ಯಾಹ್ನ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಪಕ್ಷ ಆಯೋಜಿಸಿರುವ ಜನಸೇವಕ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ಬಳಿಕ ಬಿಜೆಪಿ ಸಮನ್ವಯ ಸಮಿತಿ ಸಭೆ ನಡೆಸುವರು. ದಿವಂಗತ ಸುರೇಶ ಅಂಗಡಿ ಅವರ ನಿವಾಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳುವರು. ಸಂಜೆ ಅಧಿಕಾರಿಗಳ ಸಭೆ ನಡೆಸಿ ದೆಹಲಿಗೆ ಮರಳುವರು’ ಎಂದು ಮಾಹಿತಿ ನೀಡಿದರು.