‘ತಾಂತ್ರಿಕ ಸಮಸ್ಯೆಗಳಿಂದ ಮಹದಾಯಿ ಯೋಜನೆ ನಿಂತಿದೆ. ಈ ಯೋಜನೆ ಅನುಷ್ಠಾನವಾಗಬೇಕೆಂದು ಬಸವರಾಜ ಬೊಮ್ಮಾಯಿ ಮತ್ತು ಸಿ.ಸಿ.ಪಾಟೀಲ ಜೆಡಿಎಸ್ನಲ್ಲಿದ್ದಾಗ ಪ್ರತಿಭಟಿಸಿದ್ದರು. ಹಿಂದಿನ ಅವಧಿಯಲ್ಲಿ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕ, ಗೋವಾ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಆದರೆ, ಯೋಜನೆ ಬಗ್ಗೆ ಅವರು ಆಸಕ್ತಿ ತೋರಿಸಲಿಲ್ಲ. ಬೆಳಗಾವಿ ಅಧಿವೇಶನದಲ್ಲಾದರೂ ಈ ಬಗ್ಗೆ ಧ್ವನಿ ಎತ್ತುವರೆ ಎಂಬುದನ್ನು ಕಾದು ನೋಡಬೇಕು’ ಎಂದರು.