ಈ ಕುರಿತು ಜಂಟಿ ಹೇಳಿಕೆ ನೀಡಿರುವ ಅವರು, ‘ಬೈಕ್- ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಜಗಳ ನಡೆದ ಘಟನೆಯಲ್ಲಿ ಕೊಲೆ ಆಗಿದೆ. ಆ ಪ್ರಕರಣವನ್ನು ಗೃಹ ಸಚಿವರು ತಿರುಚಲು ಯತ್ನಿಸಿದ್ದಾರೆ. ಇಡೀ ರಾಜ್ಯದ ಶಾಂತಿ, ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರಿಂದ ಇಂತಹ ಆಘಾತಕಾರಿ ಹೇಳಿಕೆ ನಿರೀಕ್ಷಿಸಲು ಸಾಧ್ಯವಿಲ್ಲ. ಇದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದ್ದಂತೆ ಕಾಣುತ್ತಿದೆ’ ಎಂದು ದೂರಿದ್ದಾರೆ.