‘ಶಾಸಕರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮುತುವರ್ಜಿಯಿಂದ ಮಾಡುತ್ತಿದ್ದಾರೆ. ಕ್ರಿಯಾಶೀಲ ಶಾಸಕರ ಪಟ್ಟಿಯಲ್ಲಿ ಅವರಿದ್ದಾರೆ. 25 ವರ್ಷಗಳಲ್ಲಿ ಆಗದಿರುವ ಕೆಲಸಗಳನ್ನು ಮೂರು ವರ್ಷಗಳಲ್ಲಿ ಮಾಡಿದ್ದಾರೆ. ₹ 1,200 ಕೋಟಿ ಅನುದಾನ ತಂದಿದ್ದಾರೆ. ಅದನ್ನು ಸಹಿಸಿಕೊಳ್ಳಲಾಗದೆ ಹತಾಶ ಮನೋಭಾವದಿಂದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದನ್ನು ಬಿಜೆಪಿಯವರು ನಿಲ್ಲಿಸಬೇಕು. ಏನೇ ಇದ್ದರೂ ನೇರಾನೇರ ರಾಜಕಾರಣಕ್ಕೆ ಬರಬೇಕು’ ಎಂದು ಸವಾಲು ಹಾಕಿದ್ದಾರೆ.