<p><strong>ಬೆಳಗಾವಿ</strong>: ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ದಿನವನ್ನೇ ತಮ್ಮ ಜನ್ಮ ದಿನವನ್ನಾಗಿ ಆಚರಿಸಿಕೊಳ್ಳುತ್ತಿರುವ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಈ ಸಂದರ್ಭದಲ್ಲಿ ಜನರ ಸೇವೆಗೋಸ್ಕರ ಎರಡು ಆಂಬುಲೆನ್ಸ್ಗಳನ್ನು ಬುಧವಾರ ಸಮರ್ಪಿಸಿದರು.</p>.<p>‘ಕೊರಿನಾದಿಂದಾಗಿ ಜನರು ಎಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ ಎನ್ನುವ ಅರಿವಿದೆ. ನಾನು ಕೂಡ ಬಹಳಷ್ಟು ನೋವು ಅನುಭವಿಸಿದ್ದೇನೆ. ಆದಷ್ಟು ಬೇಗ ಇಂತಹ ಪರಿಸ್ಥಿತಿಯಿಂದ ಎಲ್ಲರೂ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ಷೇತ್ರದ ಜನರು ಪಕ್ಷಾತೀತವಾಗಿ ಈ ಎರಡು ಆಂಬುಲೆನ್ಸ್ಗಳನ್ನು ಬಳಸಿಕೊಳ್ಳಬೇಕು’ ಎಂದು ಕೋರಿದರು.</p>.<p>‘ಕ್ಷೇತ್ರದ ಜನರು ಹಾಸಿಗೆ, ಚುಚ್ಚುಮದ್ದು, ಆಮ್ಲಜನಕಕ್ಕಾಗಿ ಫೋನ್ ಮಾಡುತ್ತಿದ್ದಾರೆ. ಅವರ ಕಷ್ಟ ನನಗೆ ಅರ್ಥವಾಗುತ್ತದೆ. ನನ್ನ ಕೈಯಿಂದ ಸಾಧ್ಯವಾದಷ್ಟು ನೆರವು ನೀಡುತ್ತಿದ್ದೇನೆ. ಎಲ್ಲರೂ ಜಾಗೃತಿಯಿಂದ ಇರಬೇಕು’ ಎಂದು ಮನವಿ ಮಾಡಿದರು.</p>.<p>ಸಿ.ಸಿ. ಪಾಟೀಲ, ರಾಮನಗೌಡ ಪಾಟೀಲ, ಶ್ರೀಕಾಂತ ಮಾದುಬರಬಣ್ಣವರ, ಬಸನಗೌಡ ಪಾಟೀಲ, ಶಾಮ ಮುತಗೇಕರ, ಬಾಗಣ್ಣ ನರೋಟಿ, ಗಜಾನನ ಕಣಬರ್ಕರ, ಜೈವಂತ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ದಿನವನ್ನೇ ತಮ್ಮ ಜನ್ಮ ದಿನವನ್ನಾಗಿ ಆಚರಿಸಿಕೊಳ್ಳುತ್ತಿರುವ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಈ ಸಂದರ್ಭದಲ್ಲಿ ಜನರ ಸೇವೆಗೋಸ್ಕರ ಎರಡು ಆಂಬುಲೆನ್ಸ್ಗಳನ್ನು ಬುಧವಾರ ಸಮರ್ಪಿಸಿದರು.</p>.<p>‘ಕೊರಿನಾದಿಂದಾಗಿ ಜನರು ಎಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ ಎನ್ನುವ ಅರಿವಿದೆ. ನಾನು ಕೂಡ ಬಹಳಷ್ಟು ನೋವು ಅನುಭವಿಸಿದ್ದೇನೆ. ಆದಷ್ಟು ಬೇಗ ಇಂತಹ ಪರಿಸ್ಥಿತಿಯಿಂದ ಎಲ್ಲರೂ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ಷೇತ್ರದ ಜನರು ಪಕ್ಷಾತೀತವಾಗಿ ಈ ಎರಡು ಆಂಬುಲೆನ್ಸ್ಗಳನ್ನು ಬಳಸಿಕೊಳ್ಳಬೇಕು’ ಎಂದು ಕೋರಿದರು.</p>.<p>‘ಕ್ಷೇತ್ರದ ಜನರು ಹಾಸಿಗೆ, ಚುಚ್ಚುಮದ್ದು, ಆಮ್ಲಜನಕಕ್ಕಾಗಿ ಫೋನ್ ಮಾಡುತ್ತಿದ್ದಾರೆ. ಅವರ ಕಷ್ಟ ನನಗೆ ಅರ್ಥವಾಗುತ್ತದೆ. ನನ್ನ ಕೈಯಿಂದ ಸಾಧ್ಯವಾದಷ್ಟು ನೆರವು ನೀಡುತ್ತಿದ್ದೇನೆ. ಎಲ್ಲರೂ ಜಾಗೃತಿಯಿಂದ ಇರಬೇಕು’ ಎಂದು ಮನವಿ ಮಾಡಿದರು.</p>.<p>ಸಿ.ಸಿ. ಪಾಟೀಲ, ರಾಮನಗೌಡ ಪಾಟೀಲ, ಶ್ರೀಕಾಂತ ಮಾದುಬರಬಣ್ಣವರ, ಬಸನಗೌಡ ಪಾಟೀಲ, ಶಾಮ ಮುತಗೇಕರ, ಬಾಗಣ್ಣ ನರೋಟಿ, ಗಜಾನನ ಕಣಬರ್ಕರ, ಜೈವಂತ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>