‘ಸಮ್ಮಿಶ್ರ ಸರ್ಕಾರದಲ್ಲಿ ಅನುದಾನ ಸಿಗಲಿಲ್ಲ ಎಂಬ ನೆಪ ಹೇಳಿ ರಾಜೀನಾಮೆ ಕೊಟ್ಟಿದ್ದಾರೆ. ಅವರೇನು ಬಾಯಿಗೆ ಕಡುಬು ಇಟ್ಟುಕೊಂಡಿದ್ರಾ, ಕೇಳೋಕೆ ಆಗುತ್ತಿರಲಿಲ್ಲವೇ, ಮಂತ್ರಿಗಳನ್ನು ಭೇಟಿಯಾಗಿ ಕೈ ಮುಗಿಯಲು ಆಗುವುದಿಲ್ಲವೇ? ಕೊಟ್ಟ ಕುದುರೆಯನ್ನು ಬಿಟ್ಟು ಇನ್ನೊಂದನ್ನು ಏರುತ್ತೇನೆ ಎನ್ನುವ ವೀರನೂ ಅಲ್ಲ, ಶೂರನೂ ಅಲ್ಲ. ಡ್ಯಾಶ್ ಡ್ಯಾಶೂ ಅಲ್ಲ. ಹೆಣ್ಣು ಮಗಳಾಗಿ ನಾನು ಕ್ಷೇತ್ರಕ್ಕೆ ₹ 1,800 ಕೋಟಿ ತಂದಿದ್ದೇನೆ ಎಂದರೆ, ನೀವು ಗಂಡಸರು, ಸ್ವಾಭಿಮಾನಿಗಳು ನೀವೇಕೆ ಕ್ಷೇತ್ರಕ್ಕೆ ಹಣ ತರಲಿಲ್ಲ?’ ಎಂದು ಕೇಳಿದರು.