‘ಸಮಾಜದ ಈ ಹೋರಾಟ ಕಾಂಗ್ರೆಸ್ ಪ್ರಾಯೋಜಕತ್ವದ್ದಲ್ಲ. ಪಕ್ಷಾತೀತವಾದುದು. ಸಚಿವ ನಿರಾಣಿ ಅವರು ಸಮಾಜದ ಪ್ರತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿ ಭಾಗಿಯಾಗಿ ಹಿರಿಯಣ್ಣನಂತಿದ್ದರು. ಈಗ, ಸ್ವಾಮೀಜಿಗಳ ಬಗ್ಗೆ ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಬಸವ ಜಯ ಮೃತ್ಯುಂಜಯ ಶ್ರೀಗಳು ಲಿಂಗಾಯತ ಸಮಾಜಕ್ಕೆ ಕಿರೀಟವಿದ್ದಂತೆ. ಅವರು ಯಾರ ಕೈಯಲ್ಲೂ ಇಲ್ಲ. ಆದರೆ, ನಮ್ಮ ಮೀಸಲಾತಿ ಹೋರಾಟವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಅದು ಸರಿಯಲ್ಲ’ ಎಂದು ಹೇಳಿದರು.