<p><strong>ಬೆಳಗಾವಿ</strong>: ತಾಲ್ಲೂಕಿನ ನಾವಗೆ ಗ್ರಾಮದ ಬಳಿ ಈಚೆಗೆ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಮೃತಪಟ್ಟ ಮಾರ್ಕಂಡೇಯ ನಗರದ ಯುವಕ ಯಲಗೊಂಡ ಸಣ್ಣಯಲ್ಲಪ್ಪ ಗುಂಡ್ಯಾಗೋಳ ಅವರ ಕುಟುಂಬಸ್ಥರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸಾಂತ್ವನ ಹೇಳಿದರು.</p>.<p>ಮೃತ ಯುವಕನ ಮನೆಗೆ ಸೋಮವಾರ ಭೇಟಿ ನೀಡಿದ ಸಚಿವೆ, ಅವರ ತಂದೆ, ತಾಯಿ ಹಾಗೂ ಸಹೋದರಿಯರನ್ನು ಸಂತೈಸಿದರು. ಘಟನೆ ನಡೆದಿರುವುದು ದುರದೃಷ್ಟಕರ, ಇದರಿಂದ ನೋವಾಗಿವೆ. ಮೃತ ಯಲಗೊಂಡ (ಯಲ್ಲಪ್ಪ) ಕ್ರಿಯಾಶೀಲ ವ್ಯಕ್ತಿಯಾಗಿದ್ದರು. ಯುವಕನ ಕುಟುಂಬದೊಂದಿಗೆ ನಮ್ಮ ಕುಟುಂಬ ಸದಾ ಜೊತೆಗಿರುತ್ತದೆ ಎಂದು ಹೇಳಿದರು.</p>.<p>‘ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿ, ಉತ್ತಮ ಭವಿಷ್ಯ ನೀಡಿ. ಅವರನ್ನು ಚೆನ್ನಾಗಿ ಬೆಳೆಸಿ’ ಎಂದು ಸಚಿವರು ತಂದೆ -ತಾಯಿಯರಲ್ಲಿ ವಿನಂತಿಸಿದರು.</p>.<p>ವಾರದಿಂದಲೂ ಉಪವಾಸ ಇದ್ದ ಯಲಗೊಂಡ ಅವರ ತಾಯಿಗೆ ಸಮಾಧಾನ ಹೇಳಿದ ಸಚಿವೆ, ಮನೆಯಲ್ಲೇ ಕೆಲ ಹೊತ್ತು ಕಳೆದು ಅವರಿಗೆ ಊಟ ಮಾಡಿಸಿದರು</p>.<p>ಸಾಂತ್ವನ: ತಾಲ್ಲೂಕಿನ ಕೋನೆವಾಡಿ ಗ್ರಾಮದ ರೈತ ಭರ್ಮಾ ಪಾವಸೆ ಹೊಲದ ಕೆಲಸದ ಸಮಯದಲ್ಲಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸೋಮವಾರ ಮೃತ ರೈತನ ಮನೆಗೆ ತೆರಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ, ಲಕ್ಷ್ಮಿತಾಯಿ ಫೌಂಡೇಷನ್ ವತಿಯಿಂದ ಆರ್ಥಿಕವಾಗಿ ಸಹಾಯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ತಾಲ್ಲೂಕಿನ ನಾವಗೆ ಗ್ರಾಮದ ಬಳಿ ಈಚೆಗೆ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಮೃತಪಟ್ಟ ಮಾರ್ಕಂಡೇಯ ನಗರದ ಯುವಕ ಯಲಗೊಂಡ ಸಣ್ಣಯಲ್ಲಪ್ಪ ಗುಂಡ್ಯಾಗೋಳ ಅವರ ಕುಟುಂಬಸ್ಥರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸಾಂತ್ವನ ಹೇಳಿದರು.</p>.<p>ಮೃತ ಯುವಕನ ಮನೆಗೆ ಸೋಮವಾರ ಭೇಟಿ ನೀಡಿದ ಸಚಿವೆ, ಅವರ ತಂದೆ, ತಾಯಿ ಹಾಗೂ ಸಹೋದರಿಯರನ್ನು ಸಂತೈಸಿದರು. ಘಟನೆ ನಡೆದಿರುವುದು ದುರದೃಷ್ಟಕರ, ಇದರಿಂದ ನೋವಾಗಿವೆ. ಮೃತ ಯಲಗೊಂಡ (ಯಲ್ಲಪ್ಪ) ಕ್ರಿಯಾಶೀಲ ವ್ಯಕ್ತಿಯಾಗಿದ್ದರು. ಯುವಕನ ಕುಟುಂಬದೊಂದಿಗೆ ನಮ್ಮ ಕುಟುಂಬ ಸದಾ ಜೊತೆಗಿರುತ್ತದೆ ಎಂದು ಹೇಳಿದರು.</p>.<p>‘ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿ, ಉತ್ತಮ ಭವಿಷ್ಯ ನೀಡಿ. ಅವರನ್ನು ಚೆನ್ನಾಗಿ ಬೆಳೆಸಿ’ ಎಂದು ಸಚಿವರು ತಂದೆ -ತಾಯಿಯರಲ್ಲಿ ವಿನಂತಿಸಿದರು.</p>.<p>ವಾರದಿಂದಲೂ ಉಪವಾಸ ಇದ್ದ ಯಲಗೊಂಡ ಅವರ ತಾಯಿಗೆ ಸಮಾಧಾನ ಹೇಳಿದ ಸಚಿವೆ, ಮನೆಯಲ್ಲೇ ಕೆಲ ಹೊತ್ತು ಕಳೆದು ಅವರಿಗೆ ಊಟ ಮಾಡಿಸಿದರು</p>.<p>ಸಾಂತ್ವನ: ತಾಲ್ಲೂಕಿನ ಕೋನೆವಾಡಿ ಗ್ರಾಮದ ರೈತ ಭರ್ಮಾ ಪಾವಸೆ ಹೊಲದ ಕೆಲಸದ ಸಮಯದಲ್ಲಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸೋಮವಾರ ಮೃತ ರೈತನ ಮನೆಗೆ ತೆರಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ, ಲಕ್ಷ್ಮಿತಾಯಿ ಫೌಂಡೇಷನ್ ವತಿಯಿಂದ ಆರ್ಥಿಕವಾಗಿ ಸಹಾಯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>