ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಅವರು, ‘ರಾಜ್ಯದವರು ಅಫ್ಗಾನಿಸ್ತಾನದಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿದ್ದಾರೆ. ಆ ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳು ಜರುಗುತ್ತಿರುವುದರಿಂದ, ಅಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ಮತ್ತು ಸುರಕ್ಷಿತವಾಗಿ ಕರೆ ತರಲು ನೋಡಲ್ ಅಧಿಕಾರಿ ನೇಮಿಸಬೇಕು’ ಎಂದು ಆಗ್ರಹಿಸಿದ್ದಾರೆ.