<p><strong>ಹಿರೇಬಾಗೇವಾಡಿ:</strong> ಸಮೀಪದ ಕರಡಿಗುದ್ದಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ₹72 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿದ್ದ ಬಸವೇಶ್ವರ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಭಾನುವಾರ ನೆರವೇರಿಸಿದರು.</p><p>ಈ ವೇಳೆ ಮಾತನಾಡಿದ ಅವರು, ಅಧಿಕಾರ ಶಾಶ್ವತವಲ್ಲ, ಆದರೆ ಅಧಿಕಾರ ಇದ್ದಾಗ ಒಳ್ಳೆಯ ಕೆಲಸ ಮಾಡಬೇಕೆಂದು ಸಂಕಲ್ಪ ಮಾಡಿದ್ದೇನೆ. ಊರಿನ ಮಗಳಾಗಿ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಹೇಳಿದರು.</p><p>ಗ್ರಾಮದಲ್ಲಿನ ಸಂಭ್ರಮ, ಸಡಗರವನ್ನು ನೋಡಲು ಎರಡು ಕಣ್ಣು ಸಾಲದು. ಅಲಂಕಾರಿಕ ಶಿಲ್ಪಕಲೆಯೊಂದಿಗೆ ವಿನ್ಯಾಸಗೊಳಿಸಲಾದ ಈ ದೇವಸ್ಥಾನವು ಧಾರ್ಮಿಕ ನಂಬಿಕೆಗೆ ಮಾತ್ರವಲ್ಲ, ಸಾಂಸ್ಕೃತಿಕ ಸೌಂದರ್ಯಕ್ಕೂ ಮಾದರಿಯಾಗಿದೆ. ಭಕ್ತರ ಶ್ರದ್ಧೆ ಹಾಗೂ ದೇವರ ಆಶೀರ್ವಾದದಿಂದ ಈ ಪವಿತ್ರ ತಾಣ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದರು.</p><p>ಈ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ₹1.25 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುತ್ತಿದೆ. ಪಶು ಆಸ್ಪತ್ರೆ ಮಾಡಲಾಗಿದ್ದು, ₹4 ಕೋಟಿ ವೆಚ್ಚದಲ್ಲಿ ಗ್ರಾಮದ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.</p><p>ಸಚಿವರನ್ನು ಭವ್ಯ ಮೆರವಣಿಗೆಯೊಂದಿಗೆ ಊರಲ್ಲಿ ಬರಮಾಡಿಕೊಳ್ಳಲಾಯಿತು. ಪ್ರತಿ ಮನೆ ಮುಂದೆ ರಂಗವಲ್ಲಿ ಹಾಕಿ, ಆರತಿ ಬೆಳಗಿ ಸ್ವಾಗತಿಸಲಾಯಿತು.</p><p>ಕಾರ್ಯಕ್ರಮದಲ್ಲಿ ಅರಳಿಕಟ್ಟಿ ತೋಂಟದಾರ್ಯ ಮಠದ ಶಿವಮೂರ್ತಿ ಸ್ವಾಮೀಜಿ ಮಾತನಾಡಿ, ಮುಂಬರುವ ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಕರ್ನಾಟಕದ ಮೊದಲ ಮಹಿಳಾ ಮುಖ್ಯಮಂತ್ರಿ ಆಗಲಿ ಎಂದರು.</p><p>ಮುಖಂಡ ಶಂಕರಗೌಡ ಪಾಟೀಲ ಮಾತನಾಡಿದರು, ಹಾಲಪ್ಪ ನೇಸರಗಿ, ಅಶೋಕ ಮೂಕನವರ, ಚನ್ನಬಸಪ್ಪ ರಾಚನ್ನವರ, ಗ್ರಾಮ ಪಂಚಾಯತಿ ಅಧ್ಯಕ್ಷೆ ಪಾರ್ವತಿ ಅರಬಳ್ಳಿ, ಮೋಹನ ಬಡಿಗೇರ್, ಗಿರಿಜಾ ಪಾಟೀಲ, ಸಂಜಯ್ ಚಾಟೆ, ಕಾಳಪ್ಪ ಗಾಡಿವಡ್ಡರ್, ಸುರೇಶ ಪಡಗಣ್ಣವರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಬಾಗೇವಾಡಿ:</strong> ಸಮೀಪದ ಕರಡಿಗುದ್ದಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ₹72 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿದ್ದ ಬಸವೇಶ್ವರ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಭಾನುವಾರ ನೆರವೇರಿಸಿದರು.</p><p>ಈ ವೇಳೆ ಮಾತನಾಡಿದ ಅವರು, ಅಧಿಕಾರ ಶಾಶ್ವತವಲ್ಲ, ಆದರೆ ಅಧಿಕಾರ ಇದ್ದಾಗ ಒಳ್ಳೆಯ ಕೆಲಸ ಮಾಡಬೇಕೆಂದು ಸಂಕಲ್ಪ ಮಾಡಿದ್ದೇನೆ. ಊರಿನ ಮಗಳಾಗಿ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಹೇಳಿದರು.</p><p>ಗ್ರಾಮದಲ್ಲಿನ ಸಂಭ್ರಮ, ಸಡಗರವನ್ನು ನೋಡಲು ಎರಡು ಕಣ್ಣು ಸಾಲದು. ಅಲಂಕಾರಿಕ ಶಿಲ್ಪಕಲೆಯೊಂದಿಗೆ ವಿನ್ಯಾಸಗೊಳಿಸಲಾದ ಈ ದೇವಸ್ಥಾನವು ಧಾರ್ಮಿಕ ನಂಬಿಕೆಗೆ ಮಾತ್ರವಲ್ಲ, ಸಾಂಸ್ಕೃತಿಕ ಸೌಂದರ್ಯಕ್ಕೂ ಮಾದರಿಯಾಗಿದೆ. ಭಕ್ತರ ಶ್ರದ್ಧೆ ಹಾಗೂ ದೇವರ ಆಶೀರ್ವಾದದಿಂದ ಈ ಪವಿತ್ರ ತಾಣ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದರು.</p><p>ಈ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ₹1.25 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುತ್ತಿದೆ. ಪಶು ಆಸ್ಪತ್ರೆ ಮಾಡಲಾಗಿದ್ದು, ₹4 ಕೋಟಿ ವೆಚ್ಚದಲ್ಲಿ ಗ್ರಾಮದ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.</p><p>ಸಚಿವರನ್ನು ಭವ್ಯ ಮೆರವಣಿಗೆಯೊಂದಿಗೆ ಊರಲ್ಲಿ ಬರಮಾಡಿಕೊಳ್ಳಲಾಯಿತು. ಪ್ರತಿ ಮನೆ ಮುಂದೆ ರಂಗವಲ್ಲಿ ಹಾಕಿ, ಆರತಿ ಬೆಳಗಿ ಸ್ವಾಗತಿಸಲಾಯಿತು.</p><p>ಕಾರ್ಯಕ್ರಮದಲ್ಲಿ ಅರಳಿಕಟ್ಟಿ ತೋಂಟದಾರ್ಯ ಮಠದ ಶಿವಮೂರ್ತಿ ಸ್ವಾಮೀಜಿ ಮಾತನಾಡಿ, ಮುಂಬರುವ ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಕರ್ನಾಟಕದ ಮೊದಲ ಮಹಿಳಾ ಮುಖ್ಯಮಂತ್ರಿ ಆಗಲಿ ಎಂದರು.</p><p>ಮುಖಂಡ ಶಂಕರಗೌಡ ಪಾಟೀಲ ಮಾತನಾಡಿದರು, ಹಾಲಪ್ಪ ನೇಸರಗಿ, ಅಶೋಕ ಮೂಕನವರ, ಚನ್ನಬಸಪ್ಪ ರಾಚನ್ನವರ, ಗ್ರಾಮ ಪಂಚಾಯತಿ ಅಧ್ಯಕ್ಷೆ ಪಾರ್ವತಿ ಅರಬಳ್ಳಿ, ಮೋಹನ ಬಡಿಗೇರ್, ಗಿರಿಜಾ ಪಾಟೀಲ, ಸಂಜಯ್ ಚಾಟೆ, ಕಾಳಪ್ಪ ಗಾಡಿವಡ್ಡರ್, ಸುರೇಶ ಪಡಗಣ್ಣವರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>