ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ 27 ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾವೇಶ ಕಾಂಗ್ರೆಸ್ ಪ್ರಾಯೋಜಿತ ಎಂಬ ನಿರಾಣಿ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಇದು ಸಮಾಜದ ಸಮಾವೇಶ ಹಾಗೂ ಕೆಲಸವಾಗಿದೆ. ಯಾವುದೇ ಪಕ್ಷಕ್ಕೆ ಅನುಕೂಲ ಆಗಲೆಂದು ನಾವು ಹೋರಾಡುತ್ತಿಲ್ಲ’ ಎಂದು ತಿಳಿಸಿದರು.