ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರ್‌ಸಿಯುಗೆ ಜಾಗ: ಶ್ಲಾಘನೀಯ’

Last Updated 16 ಸೆಪ್ಟೆಂಬರ್ 2020, 8:16 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಿರೇಬಾಗೇವಾಡಿ ಸಮೀಪದಲ್ಲಿ ಜಾಗ ಒದಗಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿರುವುದು ಶ್ಲಾಘನೀಯವಾಗಿದೆ’ ಎಂದು ಸಿಂಡಿಕೇಟ್ ಸದಸ್ಯ ಡಾ.ಆನಂದ ಹೊಸೂರ ಹೇಳಿದ್ದಾರೆ.

‘ಜಮೀನು ಒದಗಿಸುವ ಮೂಲಕ, ವಿಶ್ವವಿದ್ಯಾಲಯದ ದಶಮಾನೋತ್ಸವ ಸಂದರ್ಭದಲ್ಲಿ ಸರ್ಕಾರವು ಈ ಭಾಗದ ಜನರಿಗೆ ಖುಷಿಯ ಸುದ್ದಿ ಕೊಟ್ಟಿದೆ. ಅನೇಕ ವರ್ಷಗಳಿಂದ ತಾಂತ್ರಿಕ ಕಾರಣಗಳಿಂದಾಗಿ ನನೆಗುದಿಗೆ ಬಿದ್ದಿದ್ದ ಅಭಿವೃದ್ಧಿ ಕಾರ್ಯಗಳು ಮುಂದುವರಿಯುವುದಕ್ಕೆ ಅವಕಾಶ ಕೊಟ್ಟಂತಾಗಿದೆ. ಇದರೊಂದಿಗೆ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಶಕ್ತಿ ತುಂಬಿದಂತೆಯೂ ಆಗಿದೆ. ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯವು ವಿಶಿಷ್ಟ ಸ್ಥಾನಮಾನ ಪಡೆಯಲಿ’ ಎಂದು ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT