ನಾಯಕರನ್ನು ಸೃಷ್ಟಿಸುವ ಶಕ್ತಿ ಇದೆ:‘ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಶಿಕ್ಷಕರೂ ಅಲ್ಲ, ಪದವೀಧರರೂ ಅಲ್ಲ’ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ನಮ್ಮಲ್ಲಿ ಟಿಕೆಟ್ಗೆ ಮೂರ್ನಾಲ್ಕು ಜನ ಆಕಾಂಕ್ಷಿಗಳಿದ್ದರು. ಆದರೆ, ಸಮೀಕ್ಷೆ ನಡೆಸಿ ಹಿರಿಯ ನಾಯಕ ಪ್ರಕಾಶ ಹುಕ್ಕೇರಿ ಅವರಿಗೆ ಟಿಕೆಟ್ ನೀಡಿದ್ದೇವೆ. ಹುಕ್ಕೇರಿ ಅವರಿಗೆ ನೂರಾರು ನಾಯಕರನ್ನು ಸೃಷ್ಟಿಸುವ ಶಕ್ತಿ ಇದ್ದು, ಲೋಕಸಭಾ, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಇದೆ. ಚಿಕ್ಕೋಡಿಯನ್ನು ಮಾದರಿ ಕ್ಷೇತ್ರವಾಗಿಸಿದ್ದಾರೆ. ಅವರಿಗೆ ಟಿಕೆಟ್ ನೀಡಿದ್ದರಲ್ಲಿ ತಪ್ಪಿಲ್ಲ’ ಎಂದು ತಿರುಗೇಟು ನೀಡಿದರು.