ಕೋವಿಡ್ ಕಾರಣದಿಂದಾಗಿ ಈ ಬಾರಿ ಮೆರವಣಿಗೆಗೆ ಅವಕಾಶ ನೀಡಿರಲಿಲ್ಲ. ಆದರೂ ಚನ್ನಮ್ಮ ವೃತ್ತದಲ್ಲಿ ನೂರಾರು ಮಂದಿ ಸೇರಿದ್ದರು. ಅಲ್ಲಲ್ಲಿ ಗುಂಪು ಗುಂಪಾಗಿ ನಿಂತಿದ್ದರು. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಬೀಸಿದರು. ಹೋಟೆಲ್ವೊಂದರ ಬಳಿ ನಿಂತಿದ್ದವರ ಮೇಲೂ ಪೊಲೀಸರು ಲಾಠಿ ಪ್ರಯೋಗಿಸಿದರು. ಈ ವೇಳೆ ತಪ್ಪಿಸಿಕೊಳ್ಳಲು ಓಡಿದ ಕೆಲವರು ಆಯತಪ್ಪಿ ಬಿದ್ದ ಘಟನೆಯೂ ನಡೆಯಿತು. ಪೊಲೀಸರು ದೂರದವರೆಗೂ ಓಡಿಸಿಕೊಂಡು ಹೋಗಿ ಗುಂಪು ಚದುರಿಸಿದರು.