ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕನ್ನಡ ರಾಜ್ಯೋತ್ಸವ ಸಂಭ್ರಮ ವೇಳೆ ಲಾಠಿ ಪ್ರಹಾರ

Last Updated 1 ನವೆಂಬರ್ 2020, 11:39 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಗುಂಪು ಗುಂಪಾಗಿ ಸೇರಿ ಸಂಭ್ರಮಾಚರಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಕೋವಿಡ್ ಕಾರಣದಿಂದಾಗಿ ಈ ಬಾರಿ ಮೆರವಣಿಗೆಗೆ ಅವಕಾಶ ನೀಡಿರಲಿಲ್ಲ. ಆದರೂ ಚನ್ನಮ್ಮ ವೃತ್ತದಲ್ಲಿ ನೂರಾರು ಮಂದಿ ಸೇರಿದ್ದರು. ಅಲ್ಲಲ್ಲಿ ಗುಂಪು ಗುಂಪಾಗಿ ನಿಂತಿದ್ದರು. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಬೀಸಿದರು. ಹೋಟೆಲ್‌ವೊಂದರ ಬಳಿ ನಿಂತಿದ್ದವರ ಮೇಲೂ ಪೊಲೀಸರು ಲಾಠಿ ಪ್ರಯೋಗಿಸಿದರು. ಈ ವೇಳೆ ತಪ್ಪಿಸಿಕೊಳ್ಳಲು ಓಡಿದ ಕೆಲವರು ಆಯತಪ್ಪಿ ಬಿದ್ದ ಘಟನೆಯೂ ನಡೆಯಿತು. ಪೊಲೀಸರು ದೂರದವರೆಗೂ ಓಡಿಸಿಕೊಂಡು ಹೋಗಿ ಗುಂಪು ಚದುರಿಸಿದರು.

ಕೆಲ ಕಿಡಿಗೇಡಿಗಳು ಮಹಾರಾಷ್ಟ್ರ ಸಾರಿಗೆ ಬಸ್ಸಿಗೆ ಕಲ್ಲು ತೂರಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದರು ಎನ್ನಲಾಗುತ್ತಿದೆ. ಆದರೆ ಅದನ್ನು ಪೊಲೀಸರು ನಿರಾಕರಿಸಿದ್ದಾರೆ. ಕೋವಿಡ್ ಮಾರ್ಗಸೂಚಿ ಪಾಲನೆಯಾಗದ ಕಾರಣ ಗುಂಪು ಚದುರಿಸಲಾಯಿತು ಎಂದು ತಿಳಿಸಿದರು.

ಪೊಲೀಸರ ಕ್ರಮ ಖಂಡಿಸಿ ಯುವಕರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಚುನಾವಣಾ ಪ್ರಚಾರಕ್ಕೆ ಅನುಮತಿ ಕೊಡಲಾಗುತ್ತದೆ. ಅಲ್ಲಿ ಕೋವಿಡ್ ಅನ್ವಯವಾಗುವುದಿಲ್ಲವೇ? ರಾಜ್ಯೋತ್ಸವ ಮೆರವಣಿಗೆ ಅವಕಾಶ ಕೊಡುವುದಿಲ್ಲವೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT