ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಿಶ್ವನಾಥ್ ಹಿರಿಯರು. ಮಂತ್ರಿಯಾಗಿ ಅಧಿಕಾರ ನಡೆಸಿದವರು. ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡುವ ಬುದ್ಧಿಜೀವಿಗಳಿದ್ದಾರೆ. ಅವರ ಬಗ್ಗೆ ನಮಗೆ ಗೌರವವಿದೆ. ಮಂತ್ರಿ ಆಗಬೇಕೆಂಬ ಅಪೇಕ್ಷೆ ಅವರಿಗಿದೆ. ಆದರೆ, ಹೈಕೋರ್ಟ್ನಲ್ಲಿ ನಿರ್ಬಂಧ ಇರುವುದರಿಂದ ಸಚಿವ ಸ್ಥಾನ ಕೊಡಲಾಗಿಲ್ಲ. ಮುಂದೆ ಮೇಲ್ಮನವಿ ಸಲ್ಲಿಸಿ ನ್ಯಾಯಾಲಯದಿಂದ ಅವಕಾಶ ಸಿಕ್ಕರೆ ಮಂತ್ರಿ ಆಗುತ್ತಾರೆ’ ಎಂದರು.