ಶನಿವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ಯಾವುದೋ ನಾಯಕರು ಏನು ಹೇಳಿದರು ಎನ್ನುವುದರ ಬಗ್ಗೆ ನಮಗೆ ಚಿಂತೆ ಇಲ್ಲ. ಆ ಬಗ್ಗೆ ಟೀಕೆ–ಟಿಪ್ಪಣಿ ಮಾಡುವುದಿಲ್ಲ. ಆದರೆ, ಬೆಳಗಾವಿ ಅಖಂಡ ಕರ್ನಾಟಕದ ಅವಿಭಾಜ್ಯ ಅಂಗ. ಅಲ್ಲಿನವರು ಯಾರೇ ಕೂಗಾಡಿದರೂ, ಹಾರಾಡಿದರೂ ಅವರ ಹೇಳಿಕೆ ಆ ರಾಜ್ಯಕ್ಕೆ ಸೀಮಿತವಾಗಿರುತ್ತದೆ. ನಮ್ಮ ರಾಜ್ಯಕ್ಕೆ ಸಂಬಂಧಿಸುವುದಿಲ್ಲ. ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟದಲ್ಲಿರುತ್ತದೆ. ಅದಕ್ಕಾಗಿಯೇ ಇಲ್ಲಿ ಸುವರ್ಣ ವಿಧಾನಸೌಧ ಕಟ್ಟಿರುವುದು ಮತ್ತು ವರ್ಷದಲ್ಲಿ ಒಮ್ಮೆ ವಿಧಾನಮಂಡಲ ಅಧಿವೇಶನ ನಡೆಸಲು ತೀರ್ಮಾನಿಸಿರುವುದು’ ಎಂದು ಹೇಳಿದರು.