<p><strong>ಬೆಳಗಾವಿ:</strong> ‘ಕಳೆದ ವರ್ಷ ಮೇ 12ರಂದು ಗ್ರಾಮೀಣ ಮತ ಕ್ಷೇತ್ರದ ಮತದಾರರು ರಾಜಕೀಯ ಪುನರ್ಜನ್ಮ ನೀಡಿದರು. ಅವರ ಸ್ಮರಣೆಯಲ್ಲಿ ಆ ದಿನವನ್ನೇ ಹುಟ್ಟುಹಬ್ಬವಾಗಿ ಆಚರಿಸಿಕೊಳ್ಳುತ್ತಿದ್ದೇನೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.</p>.<p>ಇಲ್ಲಿನ ಲಕ್ಷ್ಮಿ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಶ್ರೀಗಳಿಂದ ಭಾನುವಾರ ಆಶೀರ್ವಾದ ಪಡೆದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.</p>.<p>‘ಫೆ. 14 ನನ್ನ ಜನ್ಮ ದಿನ. ಆದರೆ, ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಿಸಿದವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ತಾಯಂದಿರ ದಿನದಂದೇ ನನ್ನನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿದರು. ಅದು ನನ್ನ ಪುಣ್ಯ. ಅವರ ಮನೆ ಮಗಳಾಗಿ ಸೇವೆ ಸಲ್ಲಿಸುತ್ತೇನೆ’ ಎಂದರು.</p>.<p>ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಶಾಸಕಿ ಕೇವಲ ಒಂದು ವರ್ಷದಲ್ಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಧಿಕಾರ ಬರುತ್ತದೆ; ಹೋಗುತ್ತದೆ. ಆದರೆ, ನಿರಂತರವಾಗಿ ಜನರ ಸಂಪರ್ಕದಲ್ಲಿದ್ದುಕೊಂಡು ಅವರ ಕಷ್ಟಗಳನ್ನು ಆಲಿಸಬೇಕು’ ಎಂದು ತಿಳಿಸಿದರು.</p>.<p>ಮುಖಂಡರಾದ ವಿರೂಪಾಕ್ಷಯ್ಯ ನೀರಲಿಗಿಠ, ಶರದ್ ಪಾಟೀಲ, ಅರವಿಂದ ಜೋಶಿ, ನಂದೀಶ, ಬಾಳಗೌಡ ಪಾಟೀಲ, ಉದಯ ಹುಲಿಕಾಂತಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕಳೆದ ವರ್ಷ ಮೇ 12ರಂದು ಗ್ರಾಮೀಣ ಮತ ಕ್ಷೇತ್ರದ ಮತದಾರರು ರಾಜಕೀಯ ಪುನರ್ಜನ್ಮ ನೀಡಿದರು. ಅವರ ಸ್ಮರಣೆಯಲ್ಲಿ ಆ ದಿನವನ್ನೇ ಹುಟ್ಟುಹಬ್ಬವಾಗಿ ಆಚರಿಸಿಕೊಳ್ಳುತ್ತಿದ್ದೇನೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.</p>.<p>ಇಲ್ಲಿನ ಲಕ್ಷ್ಮಿ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಶ್ರೀಗಳಿಂದ ಭಾನುವಾರ ಆಶೀರ್ವಾದ ಪಡೆದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.</p>.<p>‘ಫೆ. 14 ನನ್ನ ಜನ್ಮ ದಿನ. ಆದರೆ, ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಿಸಿದವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ತಾಯಂದಿರ ದಿನದಂದೇ ನನ್ನನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿದರು. ಅದು ನನ್ನ ಪುಣ್ಯ. ಅವರ ಮನೆ ಮಗಳಾಗಿ ಸೇವೆ ಸಲ್ಲಿಸುತ್ತೇನೆ’ ಎಂದರು.</p>.<p>ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಶಾಸಕಿ ಕೇವಲ ಒಂದು ವರ್ಷದಲ್ಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಧಿಕಾರ ಬರುತ್ತದೆ; ಹೋಗುತ್ತದೆ. ಆದರೆ, ನಿರಂತರವಾಗಿ ಜನರ ಸಂಪರ್ಕದಲ್ಲಿದ್ದುಕೊಂಡು ಅವರ ಕಷ್ಟಗಳನ್ನು ಆಲಿಸಬೇಕು’ ಎಂದು ತಿಳಿಸಿದರು.</p>.<p>ಮುಖಂಡರಾದ ವಿರೂಪಾಕ್ಷಯ್ಯ ನೀರಲಿಗಿಠ, ಶರದ್ ಪಾಟೀಲ, ಅರವಿಂದ ಜೋಶಿ, ನಂದೀಶ, ಬಾಳಗೌಡ ಪಾಟೀಲ, ಉದಯ ಹುಲಿಕಾಂತಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>