<p><strong>ಬೆಳಗಾವಿ: ಬೆ</strong>ಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಇನಾಮ್ ಗುಡಸ್ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿದರು.</p>.<p>₹20 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, ಗ್ರಾಮದ ದುರ್ಗಪ್ಪ ಪಾಟೀಲ ಅವರ ಮನೆಯಿಂದ ಕಲ್ಮೇಶ್ವರ ದೇವಸ್ಥಾನದ ಸಂಪರ್ಕ ಕಲಿಸುವ ₹30 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಸರ್ಕಾರಿ ಮರಾಠಿ ಶಾಲೆಗೆ ₹42.28 ಲಕ್ಷ ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದರು.</p>.<p>‘ಕ್ಷೇತ್ರದ ಶಿಕ್ಷಣದ ಅಭಿವೃದ್ಧಿಗಾಗಿ ಪ್ರಯತ್ನ ಮೀರಿ ಅನುದಾನ ತರಲಾಗುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ನೂರಾರು ಸರ್ಕಾರಿ ಶಾಲೆಗಳ ನವೀಕರಣ ಜೊತೆಗೆ ಮೂಲಸೌಕರ್ಯ ಒದಗಿಸಿದ್ದೇನೆ’ ಎಂದು ಸಚಿವೆ ತಿಳಿಸಿದರು.</p>.<p>ಮುಖಂಡರಾದ ಯುವರಾಜ ಕದಂ, ಮನೋಹರ್ ಬೆಳಗಾಂವ್ಕರ್, ನಾರಾಯಣ ಪಾಟೀಲ, ಸಾಗರ ತೋರಾಳಕರ್, ಲಕ್ಷ್ಮಣ ಪಾಟೀಲ, ಗೀತೇಶ್ ತಾನಾಬ್, ಶಿವಾಜಿ ಪಾಟೀಲ, ಶಿವಾಜಿ ತಾನಾಬ್, ಜಯಪ್ಪ ಪಾಟೀಲ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ಬೆ</strong>ಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಇನಾಮ್ ಗುಡಸ್ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿದರು.</p>.<p>₹20 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, ಗ್ರಾಮದ ದುರ್ಗಪ್ಪ ಪಾಟೀಲ ಅವರ ಮನೆಯಿಂದ ಕಲ್ಮೇಶ್ವರ ದೇವಸ್ಥಾನದ ಸಂಪರ್ಕ ಕಲಿಸುವ ₹30 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಸರ್ಕಾರಿ ಮರಾಠಿ ಶಾಲೆಗೆ ₹42.28 ಲಕ್ಷ ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದರು.</p>.<p>‘ಕ್ಷೇತ್ರದ ಶಿಕ್ಷಣದ ಅಭಿವೃದ್ಧಿಗಾಗಿ ಪ್ರಯತ್ನ ಮೀರಿ ಅನುದಾನ ತರಲಾಗುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ನೂರಾರು ಸರ್ಕಾರಿ ಶಾಲೆಗಳ ನವೀಕರಣ ಜೊತೆಗೆ ಮೂಲಸೌಕರ್ಯ ಒದಗಿಸಿದ್ದೇನೆ’ ಎಂದು ಸಚಿವೆ ತಿಳಿಸಿದರು.</p>.<p>ಮುಖಂಡರಾದ ಯುವರಾಜ ಕದಂ, ಮನೋಹರ್ ಬೆಳಗಾಂವ್ಕರ್, ನಾರಾಯಣ ಪಾಟೀಲ, ಸಾಗರ ತೋರಾಳಕರ್, ಲಕ್ಷ್ಮಣ ಪಾಟೀಲ, ಗೀತೇಶ್ ತಾನಾಬ್, ಶಿವಾಜಿ ಪಾಟೀಲ, ಶಿವಾಜಿ ತಾನಾಬ್, ಜಯಪ್ಪ ಪಾಟೀಲ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>