<p><strong>ಬೆಳಗಾವಿ</strong>: ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಫೆ.14ರಂದು ಮಧ್ಯಾಹ್ನ 2ಕ್ಕೆ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಎದುರಿನ ಮೈದಾನದಲ್ಲಿ 14,500 ಹಿರಿಯ ನಾಗರಿಕರೊಂದಿಗೆ ವಿಶಿಷ್ಟವಾಗಿ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.</p>.<p>ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೇದಿಕೆ ಸಿದ್ಧಪಡಿಸಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರಿಯ ನಾಗರಿಕರನ್ನು ಆಹ್ವಾನಿಸಿದ್ದೇವೆ. ಅವರಿಗಾಗಿ ಮೋಜಿನ ಆಟ, ಸಂವಾದ, ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದೇವೆ’ ಎಂದರು.</p>.<p>‘ಲಕ್ಷ್ಮಿ ಹೆಬ್ಬಾಳಕರ ಕಳೆದ ಎರಡೂವರೆ ವರ್ಷಗಳಿಂದ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನ, 150 ದೇವಸ್ಥಾನಗಳ ಜೀರ್ಣೋದ್ಧಾರ, ಶಿಕ್ಷಣ, ಆರೋಗ್ಯ, ಕ್ರೀಡೆ ಮತ್ತು ಧಾರ್ಮಿಕ ರಂಗಕ್ಕೆ ಹೆಚ್ಚಿನ ಅನುದಾನ ತಂದಿದ್ದಾರೆ’ ಎಂದರು.</p>.<p>‘ಕಾರ್ಯಕ್ರಮಕ್ಕೆ ರಾಜ್ಯಮಟ್ಟದ ನಾಯಕರನ್ನು ಆಹ್ವಾನಿಸುತ್ತಿದ್ದೇವೆ. ಜಿಲ್ಲೆಯ ವಿವಿಧ ಮಠಾಧೀಶರು, ಕಾಂಗ್ರೆಸ್ನ ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ. 20 ಸಾವಿರ ಜನ ಸೇರುವ ನಿರೀಕ್ಷೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಫೆ.14ರಂದು ಮಧ್ಯಾಹ್ನ 2ಕ್ಕೆ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಎದುರಿನ ಮೈದಾನದಲ್ಲಿ 14,500 ಹಿರಿಯ ನಾಗರಿಕರೊಂದಿಗೆ ವಿಶಿಷ್ಟವಾಗಿ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.</p>.<p>ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೇದಿಕೆ ಸಿದ್ಧಪಡಿಸಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರಿಯ ನಾಗರಿಕರನ್ನು ಆಹ್ವಾನಿಸಿದ್ದೇವೆ. ಅವರಿಗಾಗಿ ಮೋಜಿನ ಆಟ, ಸಂವಾದ, ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದೇವೆ’ ಎಂದರು.</p>.<p>‘ಲಕ್ಷ್ಮಿ ಹೆಬ್ಬಾಳಕರ ಕಳೆದ ಎರಡೂವರೆ ವರ್ಷಗಳಿಂದ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನ, 150 ದೇವಸ್ಥಾನಗಳ ಜೀರ್ಣೋದ್ಧಾರ, ಶಿಕ್ಷಣ, ಆರೋಗ್ಯ, ಕ್ರೀಡೆ ಮತ್ತು ಧಾರ್ಮಿಕ ರಂಗಕ್ಕೆ ಹೆಚ್ಚಿನ ಅನುದಾನ ತಂದಿದ್ದಾರೆ’ ಎಂದರು.</p>.<p>‘ಕಾರ್ಯಕ್ರಮಕ್ಕೆ ರಾಜ್ಯಮಟ್ಟದ ನಾಯಕರನ್ನು ಆಹ್ವಾನಿಸುತ್ತಿದ್ದೇವೆ. ಜಿಲ್ಲೆಯ ವಿವಿಧ ಮಠಾಧೀಶರು, ಕಾಂಗ್ರೆಸ್ನ ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ. 20 ಸಾವಿರ ಜನ ಸೇರುವ ನಿರೀಕ್ಷೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>