<p><strong>ಬೆಳಗಾವಿ</strong>: ‘ಬೆಳಗಾವಿ ಕ್ಷೇತ್ರದಲ್ಲಿ ಎರಡು ದಿನಗಳಿಂದ ಕಾಂಗ್ರೆಸ್ನವರು ಹಣ ಹಂಚುವುದು ಬಿಟ್ಟರೆ, ಮತದಾರರ ಮನವೊಲಿಕೆ ಕೆಲಸ ಮಾಡಿಲ್ಲ. ಹಣ ಹಂಚಿಕೆ ಮೇಲೆಯೇ ಅವರು ಗೆಲ್ಲುವ ಭ್ರಮೆಯಲ್ಲಿದ್ದಾರೆ’ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆರೋಪಿಸಿದರು.</p>.<p>ನಗರದಲ್ಲಿ ಮಂಗಳವಾರ ಮತದಾನದ ಬಳಿಕ ಮಾತನಾಡಿದ ಅವರು, ‘ಹಣ ಮತ್ತು ಅಧಿಕಾರದ ಬಲದ ಮೇಲೆ ಪ್ರಜಾತಂತ್ರ ವ್ಯವಸ್ಥೆ ನಡೆಯುವುದಿಲ್ಲ’ ಎಂದರು.‘</p>.<p>ಇದಕ್ಕೆ ಪ್ರತ್ಯುತ್ತರ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ‘ಹಣದ ವಿಷಯ ನಮಗೆ ಗೊತ್ತಿಲ್ಲ. ಜೂನ್ 4ರಂದು ಜನರೇ ಈ ಆರೋಪಕ್ಕೆ ಉತ್ತರಿಸುವರು. ಅಲ್ಲಿಯವರೆಗೂ ಕಾಯಬೇಕು’ ಎಂದರು.</p>.<p>ಪ್ರತಿ ಸಲದಂತೆ ಅವರು ಮತದಾನಕ್ಕಾಗಿ ಕೇಸರಿ ಬಣ್ಣದ ಸೀರೆ ಉಟ್ಟು ಬಂದರು. ಕೊರಳಲ್ಲಿ ರುದ್ರಾಕ್ಷಿ ಹಾರ ಧರಿಸಿ, ಕೈಯಲ್ಲಿ ನೊಣವಿನಕೆರೆಯ ಕಾಡಸಿದ್ಧೇಶ್ವರ ಅಜ್ಜನ ಭಾವಚಿತ್ರವನ್ನು ಕೈಯಲ್ಲಿ ಹಿಡಿದುಕೊಂಡೇ ಮತದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಬೆಳಗಾವಿ ಕ್ಷೇತ್ರದಲ್ಲಿ ಎರಡು ದಿನಗಳಿಂದ ಕಾಂಗ್ರೆಸ್ನವರು ಹಣ ಹಂಚುವುದು ಬಿಟ್ಟರೆ, ಮತದಾರರ ಮನವೊಲಿಕೆ ಕೆಲಸ ಮಾಡಿಲ್ಲ. ಹಣ ಹಂಚಿಕೆ ಮೇಲೆಯೇ ಅವರು ಗೆಲ್ಲುವ ಭ್ರಮೆಯಲ್ಲಿದ್ದಾರೆ’ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆರೋಪಿಸಿದರು.</p>.<p>ನಗರದಲ್ಲಿ ಮಂಗಳವಾರ ಮತದಾನದ ಬಳಿಕ ಮಾತನಾಡಿದ ಅವರು, ‘ಹಣ ಮತ್ತು ಅಧಿಕಾರದ ಬಲದ ಮೇಲೆ ಪ್ರಜಾತಂತ್ರ ವ್ಯವಸ್ಥೆ ನಡೆಯುವುದಿಲ್ಲ’ ಎಂದರು.‘</p>.<p>ಇದಕ್ಕೆ ಪ್ರತ್ಯುತ್ತರ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ‘ಹಣದ ವಿಷಯ ನಮಗೆ ಗೊತ್ತಿಲ್ಲ. ಜೂನ್ 4ರಂದು ಜನರೇ ಈ ಆರೋಪಕ್ಕೆ ಉತ್ತರಿಸುವರು. ಅಲ್ಲಿಯವರೆಗೂ ಕಾಯಬೇಕು’ ಎಂದರು.</p>.<p>ಪ್ರತಿ ಸಲದಂತೆ ಅವರು ಮತದಾನಕ್ಕಾಗಿ ಕೇಸರಿ ಬಣ್ಣದ ಸೀರೆ ಉಟ್ಟು ಬಂದರು. ಕೊರಳಲ್ಲಿ ರುದ್ರಾಕ್ಷಿ ಹಾರ ಧರಿಸಿ, ಕೈಯಲ್ಲಿ ನೊಣವಿನಕೆರೆಯ ಕಾಡಸಿದ್ಧೇಶ್ವರ ಅಜ್ಜನ ಭಾವಚಿತ್ರವನ್ನು ಕೈಯಲ್ಲಿ ಹಿಡಿದುಕೊಂಡೇ ಮತದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>