‘ಬೆಳಗಾವಿ ಅರಣ್ಯ ವಿಭಾಗದಲ್ಲಿ ಅರಣ್ಯ ರಕ್ಷಕ ಹುದ್ದೆಯಲ್ಲಿ ಸದ್ಯ 21 ಮಂದಿ ಪರಿಶಿಷ್ಟ ಜಾತಿ ಹಾಗೂ ಐವರು ಪರಿಶಿಷ್ಟ ಪಂಗಡದ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಅವರು 15 ವರ್ಷಗಳಿಂದ ಅರಣ್ಯ ರಕ್ಷಕ ಹುದ್ದೆಯಲ್ಲಿಯೇ ಇದ್ದಾರೆ. ಇತ್ತೀಚಿಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯು ಸರ್ಕಾರ ಆದೇಶದ ಪ್ರಕಾರ 116 ಮಂದಿಗೆ ಅರಣ್ಯ ರಕ್ಷಕ ಹುದ್ದೆಯಿಂದ ಉಪವಲಯ ಅರಣ್ಯಾಧಿಕಾರಿ ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಆದರೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರನ್ನು ಪರಿಗಣಿಸಿಲ್ಲ. ಇದರಿಂದ 21 ಮಂದಿಗೂ ಅನ್ಯಾಯವಾಗಿದೆ. ಈ ಕುರಿತು ಹಿರಿಯ ಅಧಿಕಾರಿಗಳನ್ನು ವಿಚಾರಿಸಿದರೆ, ಸ್ಪಷ್ಟವಾದ ಕಾರಣ ನೀಡುತ್ತಿಲ್ಲ’ ಎಂದು ಆರೋಪಿಸಿದರು.