<p><strong>ಬೆಳಗಾವಿ</strong>: ಇಲ್ಲಿನ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಸರ್ಕಾರಿ ಶಾಲೆ ನಂ.5ರಲ್ಲಿ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಲ್ಲಿ ಒದಗಿಸಲಾದ ಕಲಿಕಾ ಸಾಮಗ್ರಿಗಳನ್ನು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಶನಿವಾರ ವಿತರಿಸಿದರು.</p>.<p>‘ಕಳೆದ ವರ್ಷ ಅತಿವೃಷ್ಟಿಯಿಂದ ನಗರದಲ್ಲಿನ ಕೆಲವು ಶಾಲೆಗಳು ಹಾನಿಗೊಳಗಾಗಿದ್ದವು. ಇದರಿಂದ ಅಲ್ಲಿದ್ದ ಕಲಿಕಾ ಸಾಮಗ್ರಿಗಳು ಸಹ ಹಾಳಾಗಿದ್ದವು. ಅಂತಹ ಶಾಲೆಗಳಿಗೆ ಪುಸ್ತಕ, ಪೆನ್, ಬ್ಯಾಗ್ ಮೊದಲಾದ ಸಾಮಗ್ರಿಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಇದ್ದರು.</p>.<p><strong>ನಿವಾಸಿಗಳೊಂದಿಗೆ ಚರ್ಚೆ: </strong>ಶಾಸಕರು ಶ್ರೀನಗರದ ಅಂಬೇಡ್ಕರ್ ಭವನ ಹಾಗೂ ವಂಟಮೂರಿ ಕಾಲೊನಿಯ ಅಂಬೇಡ್ಕರ್ ವೃತ್ತಕ್ಕೆ ಭೇಟಿ ನೀಡಿ ನಿವಾಸಿಗಳ ಕುಂದುಕೊರತೆ ಆಲಿಸಿದರು.</p>.<p>ವೃತ್ತದ ಅಭಿವೃದ್ಧಿ ಸೇರಿದಂತೆ ಇತರ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಸರ್ಕಾರಿ ಶಾಲೆ ನಂ.5ರಲ್ಲಿ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಲ್ಲಿ ಒದಗಿಸಲಾದ ಕಲಿಕಾ ಸಾಮಗ್ರಿಗಳನ್ನು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಶನಿವಾರ ವಿತರಿಸಿದರು.</p>.<p>‘ಕಳೆದ ವರ್ಷ ಅತಿವೃಷ್ಟಿಯಿಂದ ನಗರದಲ್ಲಿನ ಕೆಲವು ಶಾಲೆಗಳು ಹಾನಿಗೊಳಗಾಗಿದ್ದವು. ಇದರಿಂದ ಅಲ್ಲಿದ್ದ ಕಲಿಕಾ ಸಾಮಗ್ರಿಗಳು ಸಹ ಹಾಳಾಗಿದ್ದವು. ಅಂತಹ ಶಾಲೆಗಳಿಗೆ ಪುಸ್ತಕ, ಪೆನ್, ಬ್ಯಾಗ್ ಮೊದಲಾದ ಸಾಮಗ್ರಿಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಇದ್ದರು.</p>.<p><strong>ನಿವಾಸಿಗಳೊಂದಿಗೆ ಚರ್ಚೆ: </strong>ಶಾಸಕರು ಶ್ರೀನಗರದ ಅಂಬೇಡ್ಕರ್ ಭವನ ಹಾಗೂ ವಂಟಮೂರಿ ಕಾಲೊನಿಯ ಅಂಬೇಡ್ಕರ್ ವೃತ್ತಕ್ಕೆ ಭೇಟಿ ನೀಡಿ ನಿವಾಸಿಗಳ ಕುಂದುಕೊರತೆ ಆಲಿಸಿದರು.</p>.<p>ವೃತ್ತದ ಅಭಿವೃದ್ಧಿ ಸೇರಿದಂತೆ ಇತರ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>