<p>ಬೆಳಗಾವಿ: ‘ಮಹಿಳಾ ಸಮುದಾಯವೇ ದಮನಿತ. ಅದರಲ್ಲೂ ಮುಸ್ಲಿಂ ಮಹಿಳೆಯರು ಇನ್ನೂ ದಮನಿತರು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಕಳವಳ ವ್ಯಕ್ತಪಡಿಸಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ–ಸಾಹಿತ್ಯ ವಿಚಾರ ವೇದಿಕೆ, ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾನು ಮುಷ್ತಾಕ್ ಮತ್ತು ಸಾ.ರಾ.ಅಬುಬಕ್ಕರ್ ಅವರ ಕೃತಿಗಳಲ್ಲಿ ಮುಸ್ಲಿಂ ಮಹಿಳೆಯರ ಸಂಕಟಗಳು ಅನಾವರಣಗೊಂಡಿವೆ. ಶಿಕ್ಷಣದ ಪರಿಣಾಮ ಕಳೆದ 25 ವರ್ಷಗಳಲ್ಲಿ ಮಹಿಳೆಯರು ಉತ್ತಮ ಸ್ಥಾನ ಪಡೆದಿದ್ದಾರೆ. ಇಂದು ಹೆಣ್ಣು ಹುಟ್ಟಿದರೆ ಬೇಸರಿಸಿಕೊಳ್ಳದ ಹೆತ್ತವರಿದ್ದಾರೆ. ಹೆಣ್ಣಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ’ ಎಂದರು.</p>.<p>‘ಇಂದು ಮಹಿಳೆಯರು ವಿವಿಧ ರಂಗಗಳಲ್ಲಿ ಉನ್ನತ ಸ್ಥಾನ ಗಳಿಸಲು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವರವಾಗಿವೆ. ಸಂವಿಧಾನ ಇರದಿದ್ದರೆ ಸ್ವಾತಂತ್ರ್ಯ, ಸಮಾನತೆ ಸಿಗುತ್ತಿರಲಿಲ್ಲ. ಬಾನು ಮುಷ್ತಾಕ್ ಅವರ ಕತೆಗಳು ಹಾಗೂ ಕುವೆಂಪು ಕೃತಿಗಳನ್ನು ಓದಿದರೆ, ಮಹಿಳೆಯರ ಸಂಕಟಗಳೇನು ಎಂಬುದು ತಿಳಿಯುತ್ತದೆ’ ಎಂದು ತಿಳಿಸಿದರು.</p>.<p>‘ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡದ ಎಂಟು ಸಾಹಿತಿಗಳ ಭಾವಚಿತ್ರದ ಜತೆಗೆ, ಇನ್ಮುಂದೆ ಬಾನು ಮುಷ್ತಾಕ್ ಅವರ ಚಿತ್ರವೂ ರಾರಾಜಿಸಲಿ’ ಎಂದರು.</p>.<p>ಬೇಡಕಿಹಾಳದ ಕೆಎಂಎಸಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಹೊಂಬಯ್ಯ ಹೊನ್ನಲಗೇರೆ, ‘ಬೂಕರ್ ಪ್ರಶಸ್ತಿ ಕನ್ನಡ ಸಾಹಿತ್ಯಕ್ಕೆ ಹೊಸ ನೋಟ ಕೊಟ್ಟಿದೆ. ಬಾನು ಮುಷ್ತಾಕ್ ಅವರ ಕತೆಗಳಲ್ಲಿ ಹೆಣ್ಣು ಶೋಷಿತಳಾಗಿ ಅಷ್ಟೇ ಅಲ್ಲ; ಪುರುಷರಿಗೆ ಸರಿಸಮನಾಗಿ ಮಹಿಳೆಯರು ಅಧಿಕಾರ ಹೊಂದಿದ ವಿಚಾರಗಳೂ ಇವೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಮೈತ್ರೇಯಿಣಿ ಗದಿಗೆಪ್ಪಗೌಡರ, ‘ಅಕಾಡೆಮಿಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂಥ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ’ ಎಂದರು.</p>.<p>ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕೆ.ಆರ್.ಸಿದ್ದಗಂಗಮ್ಮ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿಗಳಾದ ಎಲ್.ಎಸ್.ಶಾಸ್ತ್ರಿ, ನಾಗೇಶ ನಾಯಕ ಇತರರಿದ್ದರು. ನಿರ್ಮಲಾ ಬಟ್ಟಲ್ ನಿರೂಪಿಸಿದರು.</p>.<p>ಬಾನು ಮುಷ್ತಾಕ್ ಅವರ ಕತೆಗಳ ಕುರಿತಾಗಿ ಏರ್ಪಡಿಸಿದ್ದ ವಿಮರ್ಶಾ ಲೇಖನಗಳ ಸ್ಪರ್ಧೆಯಲ್ಲಿ ರೀಟಾ ಬಣಗಾರ ಪ್ರಥಮ, ಪುಷ್ಪಾ ಮುರಗೋಡ ದ್ವಿತೀಯ, ಪದ್ಮಾ ಹೊಸಕೋಟೆ ತೃತೀಯ ಸ್ಥಾನ ಗಳಿಸಿದರು. ಅವರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಮಹಿಳಾ ಸಮುದಾಯವೇ ದಮನಿತ. ಅದರಲ್ಲೂ ಮುಸ್ಲಿಂ ಮಹಿಳೆಯರು ಇನ್ನೂ ದಮನಿತರು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಕಳವಳ ವ್ಯಕ್ತಪಡಿಸಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ–ಸಾಹಿತ್ಯ ವಿಚಾರ ವೇದಿಕೆ, ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾನು ಮುಷ್ತಾಕ್ ಮತ್ತು ಸಾ.ರಾ.ಅಬುಬಕ್ಕರ್ ಅವರ ಕೃತಿಗಳಲ್ಲಿ ಮುಸ್ಲಿಂ ಮಹಿಳೆಯರ ಸಂಕಟಗಳು ಅನಾವರಣಗೊಂಡಿವೆ. ಶಿಕ್ಷಣದ ಪರಿಣಾಮ ಕಳೆದ 25 ವರ್ಷಗಳಲ್ಲಿ ಮಹಿಳೆಯರು ಉತ್ತಮ ಸ್ಥಾನ ಪಡೆದಿದ್ದಾರೆ. ಇಂದು ಹೆಣ್ಣು ಹುಟ್ಟಿದರೆ ಬೇಸರಿಸಿಕೊಳ್ಳದ ಹೆತ್ತವರಿದ್ದಾರೆ. ಹೆಣ್ಣಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ’ ಎಂದರು.</p>.<p>‘ಇಂದು ಮಹಿಳೆಯರು ವಿವಿಧ ರಂಗಗಳಲ್ಲಿ ಉನ್ನತ ಸ್ಥಾನ ಗಳಿಸಲು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವರವಾಗಿವೆ. ಸಂವಿಧಾನ ಇರದಿದ್ದರೆ ಸ್ವಾತಂತ್ರ್ಯ, ಸಮಾನತೆ ಸಿಗುತ್ತಿರಲಿಲ್ಲ. ಬಾನು ಮುಷ್ತಾಕ್ ಅವರ ಕತೆಗಳು ಹಾಗೂ ಕುವೆಂಪು ಕೃತಿಗಳನ್ನು ಓದಿದರೆ, ಮಹಿಳೆಯರ ಸಂಕಟಗಳೇನು ಎಂಬುದು ತಿಳಿಯುತ್ತದೆ’ ಎಂದು ತಿಳಿಸಿದರು.</p>.<p>‘ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡದ ಎಂಟು ಸಾಹಿತಿಗಳ ಭಾವಚಿತ್ರದ ಜತೆಗೆ, ಇನ್ಮುಂದೆ ಬಾನು ಮುಷ್ತಾಕ್ ಅವರ ಚಿತ್ರವೂ ರಾರಾಜಿಸಲಿ’ ಎಂದರು.</p>.<p>ಬೇಡಕಿಹಾಳದ ಕೆಎಂಎಸಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಹೊಂಬಯ್ಯ ಹೊನ್ನಲಗೇರೆ, ‘ಬೂಕರ್ ಪ್ರಶಸ್ತಿ ಕನ್ನಡ ಸಾಹಿತ್ಯಕ್ಕೆ ಹೊಸ ನೋಟ ಕೊಟ್ಟಿದೆ. ಬಾನು ಮುಷ್ತಾಕ್ ಅವರ ಕತೆಗಳಲ್ಲಿ ಹೆಣ್ಣು ಶೋಷಿತಳಾಗಿ ಅಷ್ಟೇ ಅಲ್ಲ; ಪುರುಷರಿಗೆ ಸರಿಸಮನಾಗಿ ಮಹಿಳೆಯರು ಅಧಿಕಾರ ಹೊಂದಿದ ವಿಚಾರಗಳೂ ಇವೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಮೈತ್ರೇಯಿಣಿ ಗದಿಗೆಪ್ಪಗೌಡರ, ‘ಅಕಾಡೆಮಿಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂಥ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ’ ಎಂದರು.</p>.<p>ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕೆ.ಆರ್.ಸಿದ್ದಗಂಗಮ್ಮ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿಗಳಾದ ಎಲ್.ಎಸ್.ಶಾಸ್ತ್ರಿ, ನಾಗೇಶ ನಾಯಕ ಇತರರಿದ್ದರು. ನಿರ್ಮಲಾ ಬಟ್ಟಲ್ ನಿರೂಪಿಸಿದರು.</p>.<p>ಬಾನು ಮುಷ್ತಾಕ್ ಅವರ ಕತೆಗಳ ಕುರಿತಾಗಿ ಏರ್ಪಡಿಸಿದ್ದ ವಿಮರ್ಶಾ ಲೇಖನಗಳ ಸ್ಪರ್ಧೆಯಲ್ಲಿ ರೀಟಾ ಬಣಗಾರ ಪ್ರಥಮ, ಪುಷ್ಪಾ ಮುರಗೋಡ ದ್ವಿತೀಯ, ಪದ್ಮಾ ಹೊಸಕೋಟೆ ತೃತೀಯ ಸ್ಥಾನ ಗಳಿಸಿದರು. ಅವರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>