‘ಅನಕ್ಷರತೆ ದೇಶಕ್ಕೆ ಅಂಟಿದ ಶಾಪವಾಗಿದೆ. ಅದನ್ನು ಹೋಗಲಾಡಿಸಲು ಪ್ರತಿ ವಿದ್ಯಾರ್ಥಿ ಕನಿಷ್ಠ ಐವರನ್ನು ಸಾಕ್ಷರರನ್ನಾಗಿಸಬೇಕು. ಅಧ್ಯಾಪಕರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ನೀಡಬೇಕು. ಅವರಲ್ಲಿ ವೈಚಾರಿಕ ಮನೋಭಾವ ಬಿತ್ತಬೇಕು. ದೇಶವನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಲುಶಿಕ್ಷಣದಿಂದ ಮಾತ್ರ ಸಾಧ್ಯವಿದೆ. ಈ ನಿಟ್ಟಿನಲ್ಲಿ ಕೆಲಸಗಳು ತೀವ್ರಗೊಳ್ಳಬೇಕು’ ಎಂದರು.