<p><strong>ಬೆಳಗಾವಿ:</strong> ‘ಸಂವಿಧಾನ ಎಲ್ಲರಿಗೂ ಸಮಾನ ನ್ಯಾಯ ಒದಗಿಸಿದೆ. ನಾವೆಲ್ಲರೂ ಅದರಿಂದ ಲಾಭ ಪಡೆದು ಪ್ರಗತಿ ಸಾಧಿಸಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯ ಪ್ರಸಾರಾಂಗದ ವಿಶ್ರಾಂತ ನಿರ್ದೇಶಕ ಪ್ರೊ.ಸಿ. ನಾಗಣ್ಣ ಹೇಳಿದರು.</p>.<p>ಇಲ್ಲಿನ ಭಾವುರಾವ ಕಾಕತಕರ ಕಾಲೇಜಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ದಶಮಾನೋತ್ಸವ ಸಂಭ್ರಮ ಅಂಗವಾಗಿ ಬುಧವಾರ ನಡೆದ ವಿಸ್ತರಣಾ ಉಪನ್ಯಾಸ ಮಾಲಿಕೆ ಮತ್ತು ‘ಇಂಗ್ಲಿಷ್ ವಿಭಾಗದ ಕನ್ನಡ ಕವನಗಳು’ ಕೃತಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅನಕ್ಷರತೆ ದೇಶಕ್ಕೆ ಅಂಟಿದ ಶಾಪವಾಗಿದೆ. ಅದನ್ನು ಹೋಗಲಾಡಿಸಲು ಪ್ರತಿ ವಿದ್ಯಾರ್ಥಿ ಕನಿಷ್ಠ ಐವರನ್ನು ಸಾಕ್ಷರರನ್ನಾಗಿಸಬೇಕು. ಅಧ್ಯಾಪಕರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ನೀಡಬೇಕು. ಅವರಲ್ಲಿ ವೈಚಾರಿಕ ಮನೋಭಾವ ಬಿತ್ತಬೇಕು. ದೇಶವನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಲುಶಿಕ್ಷಣದಿಂದ ಮಾತ್ರ ಸಾಧ್ಯವಿದೆ. ಈ ನಿಟ್ಟಿನಲ್ಲಿ ಕೆಲಸಗಳು ತೀವ್ರಗೊಳ್ಳಬೇಕು’ ಎಂದರು.</p>.<p>‘ಶಿಕ್ಷಣ ಸ್ವಾವಲಂಬಿಯಾಗಿಸುತ್ತದೆ. ಶಿಕ್ಷಣದ ಮೂಲ ಆಶಯಗಳು ಸಾಕಾರವಾಗಬೇಕಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಪ್ರಾಚಾರ್ಯ ಡಾ.ಎಸ್.ಎನ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ, ಡಾ.ಕವಿತಾ ಕುಸುಗಲ್ಲ ಇದ್ದರು.</p>.<p>ನಾಟಕಕಾರ ಡಿ.ಎಸ್. ಚೌಗಲೆ ಸ್ವಾಗತಿಸಿದರು. ಆರ್ಸಿಯು ಪ್ರಸಾರಾಂಗ ವಿಭಾಗದ ನಿರ್ದೇಶಕ ಪ್ರೊ.ಅಶೋಕ ಡಿಸೋಜಾ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಸಂವಿಧಾನ ಎಲ್ಲರಿಗೂ ಸಮಾನ ನ್ಯಾಯ ಒದಗಿಸಿದೆ. ನಾವೆಲ್ಲರೂ ಅದರಿಂದ ಲಾಭ ಪಡೆದು ಪ್ರಗತಿ ಸಾಧಿಸಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯ ಪ್ರಸಾರಾಂಗದ ವಿಶ್ರಾಂತ ನಿರ್ದೇಶಕ ಪ್ರೊ.ಸಿ. ನಾಗಣ್ಣ ಹೇಳಿದರು.</p>.<p>ಇಲ್ಲಿನ ಭಾವುರಾವ ಕಾಕತಕರ ಕಾಲೇಜಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ದಶಮಾನೋತ್ಸವ ಸಂಭ್ರಮ ಅಂಗವಾಗಿ ಬುಧವಾರ ನಡೆದ ವಿಸ್ತರಣಾ ಉಪನ್ಯಾಸ ಮಾಲಿಕೆ ಮತ್ತು ‘ಇಂಗ್ಲಿಷ್ ವಿಭಾಗದ ಕನ್ನಡ ಕವನಗಳು’ ಕೃತಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅನಕ್ಷರತೆ ದೇಶಕ್ಕೆ ಅಂಟಿದ ಶಾಪವಾಗಿದೆ. ಅದನ್ನು ಹೋಗಲಾಡಿಸಲು ಪ್ರತಿ ವಿದ್ಯಾರ್ಥಿ ಕನಿಷ್ಠ ಐವರನ್ನು ಸಾಕ್ಷರರನ್ನಾಗಿಸಬೇಕು. ಅಧ್ಯಾಪಕರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ನೀಡಬೇಕು. ಅವರಲ್ಲಿ ವೈಚಾರಿಕ ಮನೋಭಾವ ಬಿತ್ತಬೇಕು. ದೇಶವನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಲುಶಿಕ್ಷಣದಿಂದ ಮಾತ್ರ ಸಾಧ್ಯವಿದೆ. ಈ ನಿಟ್ಟಿನಲ್ಲಿ ಕೆಲಸಗಳು ತೀವ್ರಗೊಳ್ಳಬೇಕು’ ಎಂದರು.</p>.<p>‘ಶಿಕ್ಷಣ ಸ್ವಾವಲಂಬಿಯಾಗಿಸುತ್ತದೆ. ಶಿಕ್ಷಣದ ಮೂಲ ಆಶಯಗಳು ಸಾಕಾರವಾಗಬೇಕಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಪ್ರಾಚಾರ್ಯ ಡಾ.ಎಸ್.ಎನ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ, ಡಾ.ಕವಿತಾ ಕುಸುಗಲ್ಲ ಇದ್ದರು.</p>.<p>ನಾಟಕಕಾರ ಡಿ.ಎಸ್. ಚೌಗಲೆ ಸ್ವಾಗತಿಸಿದರು. ಆರ್ಸಿಯು ಪ್ರಸಾರಾಂಗ ವಿಭಾಗದ ನಿರ್ದೇಶಕ ಪ್ರೊ.ಅಶೋಕ ಡಿಸೋಜಾ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>