<p><strong>ಬೆಳಗಾವಿ: </strong>ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ನುಗ್ಗಿದ ಚಿರತೆ ಭಾನುವಾರವೂ ಸೆರೆ ಸಿಕ್ಕಿಲ್ಲ. ಅದರ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಮೂರನೇ ದಿನವೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.</p>.<p>ಈ ಚಿರತೆ ಪೊದೆ ಸೇರಿಕೊಂಡಿದ್ದು ಜಾಧವ ನಗರದ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆ ಜಾಗದಲ್ಲಿ ಬೋನು ಇಟ್ಟು, ಅದರಲ್ಲಿ ನಾಯಿ ಕಟ್ಟಲಾಗಿತ್ತು. ಈಗ ಗಾಲ್ಫ್ ಮೈದಾನದಲ್ಲಿ ಚಿರತೆ ಕಾಣಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರಿಂದ, ಸಿಬ್ಬಂದಿ ಅತ್ತ ದೌಡಾಯಿಸಿದ್ದಾರೆ. ಜಾಧವ ನಗರದಲ್ಲಿ ಇಡಲಾಗಿದ್ದ ಬೋನು, ಗಾಲ್ಫ್ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/leopard-entered-belagavi-city-attack-on-construction-workers-960924.html" itemprop="url" target="_blank">ಬೆಳಗಾವಿಯಲ್ಲಿ ಇನ್ನೂ ಪತ್ತೆಯಾಗದ ಚಿರತೆ: ಹೊರಗೆ ಬಾರದ ಜನ </a></p>.<p><strong>ಸ್ಥಳೀಯರಲ್ಲಿ ಆತಂಕ:</strong> ಜಾಧವ ನಗರ ಹಾಗೂ ಸುತ್ತಲಿನ ಪ್ರದೇಶಗಳ ಜನರಿಗೆ ಚಿರತೆ ಭಯ ಕಾಡುತ್ತಿದೆ. ಹಾಗಾಗಿ ಬಹುತೇಕರು ಮನೆಯಿಂದ ಹೊರಬರುತ್ತಿಲ್ಲ. ನಿತ್ಯ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರಕ್ಕೆ ಬರುತ್ತಿದ್ದವರೂ ಇತ್ತ ಸುಳಿಯುತ್ತಿಲ್ಲ. ಮೂರು ದಿನಗಳಾದರೂ ಚಿರತೆ ಪತ್ತೆಯಾಗದಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.</p>.<p>‘ಅರಣ್ಯ ಇಲಾಖೆ ಕಾರ್ಯಾಚರಣೆ ಚುರುಕುಗೊಳಿಸುತ್ತಿಲ್ಲ’ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗಾಲ್ಫ್ ಮೈದಾನದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಈ ಮಾರ್ಗದ ಮುಖ್ಯರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ.</p>.<p>‘ಗಾಲ್ಫ್ ಮೈದಾನದಲ್ಲಿ ಚಿರತೆ ಕಾಣಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಾಗಾಗಿ ಇಲ್ಲಿಗೆ ಬೋನು ಸ್ಥಳಾಂತರಿಸಿ, 50 ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದೇವೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಿಂದಲೂ ನಾಲ್ಕು ಬೋನು ತರಿಸಲಾಗುತ್ತಿದೆ’ ಎಂದು ವಲಯ ಅರಣ್ಯಾಧಿಕಾರಿ ರಾಕೇಶ ಅರ್ಜುನವಾಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/leopard-attack-on-son-mother-dies-of-heart-attack-960866.html" itemprop="url" target="_blank">ಮಗನ ಮೇಲೆ ಚಿರತೆ ದಾಳಿ: ಹೃದಯಾಘಾತದಿಂದ ತಾಯಿ ಸಾವು </a></p>.<p>‘ಚಿರತೆ ಪತ್ತೆಯಾಗುವವರೆಗೆ ಜನರು ಅನಗತ್ಯವಾಗಿ ಮನೆಯಿಂದ ಹೊರಬರಬಾರದು. ಕಾರ್ಯಾಚರಣೆ ನಡೆಸುತ್ತಿರುವವರಿಗೆ ಸಹಕರಿಸಬೇಕು. ಪೊದೆಗಳು ಇರುವ ಕಡೆ ಒಬ್ಬರೇ ಓಡಾಡಬಾರದು. ವಾಯುವಿಹಾರಕ್ಕೆ ಬರಬಾರದು’ ಎಂದು ಕೋರಿದರು.</p>.<p>ಕಟ್ಟಡ ಕಾರ್ಮಿಕ ಸಿದರಾಯಿ ನಿಲಜಕರ್ ಎನ್ನುವವರ ಮೇಲೆ ಈ ಚಿರತೆ ದಾಳಿ ಮಾಡಿ ಗಾಯಗೊಳಿಸಿತ್ತು. ಇದರಿಂದ ಬೆಚ್ಚಿ ಬಿದ್ದ ಅವರ ತಾಯಿ ಶಾಂತಾ ಹೃದಯಾಘಾತದಿಂದ ನಿಧನರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ನುಗ್ಗಿದ ಚಿರತೆ ಭಾನುವಾರವೂ ಸೆರೆ ಸಿಕ್ಕಿಲ್ಲ. ಅದರ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಮೂರನೇ ದಿನವೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.</p>.<p>ಈ ಚಿರತೆ ಪೊದೆ ಸೇರಿಕೊಂಡಿದ್ದು ಜಾಧವ ನಗರದ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆ ಜಾಗದಲ್ಲಿ ಬೋನು ಇಟ್ಟು, ಅದರಲ್ಲಿ ನಾಯಿ ಕಟ್ಟಲಾಗಿತ್ತು. ಈಗ ಗಾಲ್ಫ್ ಮೈದಾನದಲ್ಲಿ ಚಿರತೆ ಕಾಣಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರಿಂದ, ಸಿಬ್ಬಂದಿ ಅತ್ತ ದೌಡಾಯಿಸಿದ್ದಾರೆ. ಜಾಧವ ನಗರದಲ್ಲಿ ಇಡಲಾಗಿದ್ದ ಬೋನು, ಗಾಲ್ಫ್ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/leopard-entered-belagavi-city-attack-on-construction-workers-960924.html" itemprop="url" target="_blank">ಬೆಳಗಾವಿಯಲ್ಲಿ ಇನ್ನೂ ಪತ್ತೆಯಾಗದ ಚಿರತೆ: ಹೊರಗೆ ಬಾರದ ಜನ </a></p>.<p><strong>ಸ್ಥಳೀಯರಲ್ಲಿ ಆತಂಕ:</strong> ಜಾಧವ ನಗರ ಹಾಗೂ ಸುತ್ತಲಿನ ಪ್ರದೇಶಗಳ ಜನರಿಗೆ ಚಿರತೆ ಭಯ ಕಾಡುತ್ತಿದೆ. ಹಾಗಾಗಿ ಬಹುತೇಕರು ಮನೆಯಿಂದ ಹೊರಬರುತ್ತಿಲ್ಲ. ನಿತ್ಯ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರಕ್ಕೆ ಬರುತ್ತಿದ್ದವರೂ ಇತ್ತ ಸುಳಿಯುತ್ತಿಲ್ಲ. ಮೂರು ದಿನಗಳಾದರೂ ಚಿರತೆ ಪತ್ತೆಯಾಗದಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.</p>.<p>‘ಅರಣ್ಯ ಇಲಾಖೆ ಕಾರ್ಯಾಚರಣೆ ಚುರುಕುಗೊಳಿಸುತ್ತಿಲ್ಲ’ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗಾಲ್ಫ್ ಮೈದಾನದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಈ ಮಾರ್ಗದ ಮುಖ್ಯರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ.</p>.<p>‘ಗಾಲ್ಫ್ ಮೈದಾನದಲ್ಲಿ ಚಿರತೆ ಕಾಣಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಾಗಾಗಿ ಇಲ್ಲಿಗೆ ಬೋನು ಸ್ಥಳಾಂತರಿಸಿ, 50 ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದೇವೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಿಂದಲೂ ನಾಲ್ಕು ಬೋನು ತರಿಸಲಾಗುತ್ತಿದೆ’ ಎಂದು ವಲಯ ಅರಣ್ಯಾಧಿಕಾರಿ ರಾಕೇಶ ಅರ್ಜುನವಾಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/leopard-attack-on-son-mother-dies-of-heart-attack-960866.html" itemprop="url" target="_blank">ಮಗನ ಮೇಲೆ ಚಿರತೆ ದಾಳಿ: ಹೃದಯಾಘಾತದಿಂದ ತಾಯಿ ಸಾವು </a></p>.<p>‘ಚಿರತೆ ಪತ್ತೆಯಾಗುವವರೆಗೆ ಜನರು ಅನಗತ್ಯವಾಗಿ ಮನೆಯಿಂದ ಹೊರಬರಬಾರದು. ಕಾರ್ಯಾಚರಣೆ ನಡೆಸುತ್ತಿರುವವರಿಗೆ ಸಹಕರಿಸಬೇಕು. ಪೊದೆಗಳು ಇರುವ ಕಡೆ ಒಬ್ಬರೇ ಓಡಾಡಬಾರದು. ವಾಯುವಿಹಾರಕ್ಕೆ ಬರಬಾರದು’ ಎಂದು ಕೋರಿದರು.</p>.<p>ಕಟ್ಟಡ ಕಾರ್ಮಿಕ ಸಿದರಾಯಿ ನಿಲಜಕರ್ ಎನ್ನುವವರ ಮೇಲೆ ಈ ಚಿರತೆ ದಾಳಿ ಮಾಡಿ ಗಾಯಗೊಳಿಸಿತ್ತು. ಇದರಿಂದ ಬೆಚ್ಚಿ ಬಿದ್ದ ಅವರ ತಾಯಿ ಶಾಂತಾ ಹೃದಯಾಘಾತದಿಂದ ನಿಧನರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>