ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗನ ಮೇಲೆ ಚಿರತೆ ದಾಳಿ: ಹೃದಯಾಘಾತದಿಂದ ತಾಯಿ ಸಾವು

Last Updated 5 ಆಗಸ್ಟ್ 2022, 21:30 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಜಾಧವನಗರ ಜನವಸತಿ ಪ್ರದೇಶದಲ್ಲೇ ಶುಕ್ರವಾರ ಮಧ್ಯಾಹ್ನ ಕಟ್ಟಡ ಕಾರ್ಮಿಕರೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಕಾರ್ಮಿಕ ಪ್ರಾಣಾಪಾಯದಿಂದ ‍ಪಾರಾಗಿದ್ದಾರೆ. ಆದರೆ, ವಿಷಯ ಕೇಳಿದ ಅವರ ತಾಯಿ ಹೃದಯಾಘಾತದಿಂದ ಮೃತರಾದರು.

ತಾಲ್ಲೂಕಿನ ಖನಗಾವ ಗ್ರಾಮದ ಸಿದರಾಯಿ ಲಕ್ಷ್ಮಣ ನಿಲಜಕರ್‌ (38) ಅವರಿಗೆ ಚಿರತೆ ದಾಳಿಯಿಂದ ಗಾಯವಾಗಿದೆ. ದಾಳಿ ಸುದ್ದಿ ಕೇಳಿ ಅವರ ತಾಯಿ ಶಾಂತಾ ನಿಲಜಕರ್ (65) ಮನೆಯಲ್ಲಿ ಕುಸಿದುಬಿದ್ದು ಮೃತಪಟ್ಟರು.

ನಗರಕ್ಕೇ ನುಗ್ಗಿದ ಚಿರತೆ: ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ಸೆರೆಗೆ ಗದಗನಿಂದ ಪರಿಣತರ ತಂಡ ಕರೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT