<p><strong>ಬೆಳಗಾವಿ:</strong> ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ನುಗ್ಗಿದ ಚಿರತೆ 24 ತಾಸುಗಳ ನಂತರವೂ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ನಿರಂತರ ಶೋಧ ನಡೆಸಿದ್ದಾರೆ.</p>.<p>ಇನ್ನೊಂದೆಡೆ, ಚಿರತೆ ಭಯದಿಂದಾಗಿ ಈ ಪ್ರದೇಶದಲ್ಲಿ ಜನರು ಮನೆಯಿಂದ ಹೊರಬಂದಿಲ್ಲ. ಪ್ರತಿ ದಿನ ವಾಯು ವಿಹಾರಿಗಳಿಂದ ತುಂಬಿರುತ್ತಿದ್ದ ಇಲ್ಲಿನ ಜಾಧವ ನಗರ, ಹನುಮಾನ್ನಗರ, ಸಹ್ಯಾದ್ರಿ ನಗರ, ಟಿ.ವಿ ಸೆಂಟರ್ ಮುಂತಾದ ಪ್ರದೇಶದ ರಸ್ತೆಗಳು ಶನಿವಾರ ಬೆಳಿಗ್ಗೆ ಬಿಕೋ ಎನ್ನುತ್ತಿದ್ದವು.</p>.<p>ಶಾಲೆ, ಕಾಲೇಜಿಗೆ ಹೋಗುವವರು, ಕಚೇರಿ ಕೆಲಸ, ವ್ಯಾಪಾರ ಅನಿವಾರ್ಯ ಇದ್ದವರು ಅಲ್ಲಿಲ್ಲಿ ಕಾಣಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/leopard-attack-on-son-mother-dies-of-heart-attack-960866.html" itemprop="url" target="_blank">ಮಗನ ಮೇಲೆ ಚಿರತೆ ದಾಳಿ: ಹೃದಯಾಘಾತದಿಂದ ತಾಯಿ ಸಾವು </a></p>.<p>ಚಿರತೆ ಸೆರೆ ಸಿಗುವವರೆಗೂ ಜನ ಎಚ್ಚರಿಕೆಯಿಂದ ಇರಬೇಕು, ಬೆಳಿಗ್ಗೆ ಮತ್ತು ಸಂಜೆ ವಾಯು ವಿಹಾರಕ್ಕೆ ಹೋಗಬಾರದು, ಮಕ್ಕಳನ್ನೂ ಹೊರಗೆ ಬಿಡಬಾರದು, ಒಂಟಿಯಾಗಿ ಪೊದೆಗಳ ಹತ್ತಿರ ಓಡಾಡಬಾರದು ಎಂದು ನಗರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p>.<p>ಸುತ್ತಲಿನ ಪ್ರದೇಶಗಳಲ್ಲಿ ಪಹರೆ ಮುಂದುವರಿಸಲಾಗಿದೆ. ಜನ- ವಾಹನ ಸಂಚಾರ ವಿರಳವಾಗಿದೆ. ಪೊದೆಗಳು ಹೆಚ್ಚು ಇರುವ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.</p>.<p>ಶನಿವಾರವೂ ಹುಡುಕಾಟ ಮುಂದುವರಿದಿದೆ. ಬೆಳಿಗ್ಗೆ ಆಟೊ ನಗರದಲ್ಲಿ ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಗೆ ಚಿರತೆ ಕಂಡಿದೆ ಎಂದು ಹೇಳಿದ್ದರೂ ಖಚಿತವಾಗಿಲ್ಲ. ಈ ಜಾಗದಲ್ಲಿ ಎಲ್ಲಿಯೂ ಹೆಜ್ಜೆ ಗುರುತುಗಳೂ ಪತ್ತೆಯಾಗಿಲ್ಲ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/leopard-attack-in-belagavi-city-960792.html" itemprop="url" target="_blank">ಬೆಳಗಾವಿಗೆಬಂದ ‘ಕಾಡಿನ ಅತಿಥಿ’ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ನುಗ್ಗಿದ ಚಿರತೆ 24 ತಾಸುಗಳ ನಂತರವೂ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ನಿರಂತರ ಶೋಧ ನಡೆಸಿದ್ದಾರೆ.</p>.<p>ಇನ್ನೊಂದೆಡೆ, ಚಿರತೆ ಭಯದಿಂದಾಗಿ ಈ ಪ್ರದೇಶದಲ್ಲಿ ಜನರು ಮನೆಯಿಂದ ಹೊರಬಂದಿಲ್ಲ. ಪ್ರತಿ ದಿನ ವಾಯು ವಿಹಾರಿಗಳಿಂದ ತುಂಬಿರುತ್ತಿದ್ದ ಇಲ್ಲಿನ ಜಾಧವ ನಗರ, ಹನುಮಾನ್ನಗರ, ಸಹ್ಯಾದ್ರಿ ನಗರ, ಟಿ.ವಿ ಸೆಂಟರ್ ಮುಂತಾದ ಪ್ರದೇಶದ ರಸ್ತೆಗಳು ಶನಿವಾರ ಬೆಳಿಗ್ಗೆ ಬಿಕೋ ಎನ್ನುತ್ತಿದ್ದವು.</p>.<p>ಶಾಲೆ, ಕಾಲೇಜಿಗೆ ಹೋಗುವವರು, ಕಚೇರಿ ಕೆಲಸ, ವ್ಯಾಪಾರ ಅನಿವಾರ್ಯ ಇದ್ದವರು ಅಲ್ಲಿಲ್ಲಿ ಕಾಣಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/leopard-attack-on-son-mother-dies-of-heart-attack-960866.html" itemprop="url" target="_blank">ಮಗನ ಮೇಲೆ ಚಿರತೆ ದಾಳಿ: ಹೃದಯಾಘಾತದಿಂದ ತಾಯಿ ಸಾವು </a></p>.<p>ಚಿರತೆ ಸೆರೆ ಸಿಗುವವರೆಗೂ ಜನ ಎಚ್ಚರಿಕೆಯಿಂದ ಇರಬೇಕು, ಬೆಳಿಗ್ಗೆ ಮತ್ತು ಸಂಜೆ ವಾಯು ವಿಹಾರಕ್ಕೆ ಹೋಗಬಾರದು, ಮಕ್ಕಳನ್ನೂ ಹೊರಗೆ ಬಿಡಬಾರದು, ಒಂಟಿಯಾಗಿ ಪೊದೆಗಳ ಹತ್ತಿರ ಓಡಾಡಬಾರದು ಎಂದು ನಗರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p>.<p>ಸುತ್ತಲಿನ ಪ್ರದೇಶಗಳಲ್ಲಿ ಪಹರೆ ಮುಂದುವರಿಸಲಾಗಿದೆ. ಜನ- ವಾಹನ ಸಂಚಾರ ವಿರಳವಾಗಿದೆ. ಪೊದೆಗಳು ಹೆಚ್ಚು ಇರುವ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.</p>.<p>ಶನಿವಾರವೂ ಹುಡುಕಾಟ ಮುಂದುವರಿದಿದೆ. ಬೆಳಿಗ್ಗೆ ಆಟೊ ನಗರದಲ್ಲಿ ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಗೆ ಚಿರತೆ ಕಂಡಿದೆ ಎಂದು ಹೇಳಿದ್ದರೂ ಖಚಿತವಾಗಿಲ್ಲ. ಈ ಜಾಗದಲ್ಲಿ ಎಲ್ಲಿಯೂ ಹೆಜ್ಜೆ ಗುರುತುಗಳೂ ಪತ್ತೆಯಾಗಿಲ್ಲ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/leopard-attack-in-belagavi-city-960792.html" itemprop="url" target="_blank">ಬೆಳಗಾವಿಗೆಬಂದ ‘ಕಾಡಿನ ಅತಿಥಿ’ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>