<p><strong>ಬೆಳಗಾವಿ:</strong> ‘ಕನ್ನಡ ಅನ್ನದ ಭಾಷೆಯಾಗಬೇಕು. ಸರ್ಕಾರ ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಬೇಕು’ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.</p>.<p>ಸಪ್ತ ಸ್ವರ ಸಂಗೀತ ಕಲಾ ಬಳಗವು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಇಲ್ಲಿನ ಶಿವಬಸವನಗರದ ಎಸ್ಜಿಬಿಐಟಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಗಡಿ ಕನ್ನಡ ಸಾಂಸ್ಕೃತಿಕ ಉತ್ಸವ’, ಕವಿಗೋಷ್ಠಿ ಹಾಗೂ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕನ್ನಡದಲ್ಲಿ ಓದಿದವರಿಗಷ್ಟೆ ಸರ್ಕಾರಿ ಹಾಗೂ ಖಾಸಗಿ ರಂಗದಲ್ಲಿ ಉದ್ಯೋಗವಕಾಶ ಸಿಗುವಂತಾಗಬೇಕು. ಆಗ ಮಾತೃಭಾಷೆಯೂ ಉಳಿಯುತ್ತದೆ. ನಾಡಿನ ಬಗ್ಗೆ ಯುವಕ-ಯುವತಿಯರಲ್ಲಿ ಅಭಿಮಾನವೂ ಬೆಳೆಯುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಯಾವುದೇ ರಾಜ್ಯಗಳಲ್ಲೂ ಪ್ರಾದೇಶಿಕ ಭಾಷೆಗಳ ರಕ್ಷಣೆಗಾಗಿ ನಿಗಮ, ಪ್ರಾಧಿಕಾರಗಳಿಲ್ಲ. ಆದರೆ, ಕರ್ನಾಟಕದಲ್ಲಿ ಮಾತೃಭಾಷೆ ಹಾಗೂ ಗಡಿ ಸಂರಕ್ಷಣೆಗಾಗಿಯೆ ಸಂಸ್ಥೆಗಳು ಹುಟ್ಟಿಕೊಂಡಿರುವುದು ದುರಂತ. ಕನ್ನಡಿಗರಲ್ಲಿರುವ ಉದಾರತೆಯೇ ಇದಕ್ಕೆ ಕಾರಣ’ ಎಂದು ವಿಷಾದಿಸಿದರು.</p>.<p>ಸಾಹಿತಿ ಯ.ರು. ಪಾಟೀಲ ಮಾತನಾಡಿ, ‘ಮಕ್ಕಳು ಬಳಸಿದರೆ ಮಾತ್ರ ಯಾವುದೇ ಭಾಷೆಯ ಬೆಳವಣಿಗೆಯಾಗುತ್ತದೆ. ಹಾಗಾಗಿ ಮಕ್ಕಳಲ್ಲಿ ಕನ್ನಡದ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಪ್ರತಿ ಮನೆಯಿಂದ ಕನ್ನಡ ಉಳಿಸಿ, ಬೆಳೆಸುವ ಅಭಿಯಾನ ಆರಂಭವಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಶಿಕ್ಷಕ ಪಿ.ಎಸ್. ವಂಟಗೋಡಿ ಮಾತನಾಡಿ, ‘ನಾವೂ ಎಲ್ಲ ಭಾಷೆಗಳನ್ನೂ ಪ್ರೀತಿಸಬೇಕು. ಆದರೆ, ಕನ್ನಡವನ್ನು ಪೂಜಿಸಬೇಕು. ಪಾಶ್ಚಾತ್ಯ ಸಂಸ್ಕೃತಿಯಿಂದ ಹೊರ ಬಂದು ಕನ್ನಡ ಕಟ್ಟುವ ಕೆಲಸದಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಅಪ್ಪಾಸಾಹೇಬ ಅಲಿಬಾದಿ, ‘ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇದರೊಂದಿಗೆ, ಈ ಭಾಗದ ಜನರ ಬಹುದಿನಗಳ ಕನಸು ನನಸಾಗಿಸುತ್ತಿದ್ದಾರೆ. ಹೆಸರಷ್ಟೇ ಬದಲಾದರೆ ಸಾಲದು. ಈ ಭಾಗದ ಅಭಿವೃದ್ಧಿಗೂ ಸರ್ಕಾರ ಒತ್ತು ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ಬಾಳಾಸಾಹೇಬ ಉದಗಟ್ಟಿ, ಬಸವರಾಜ ಗಾರ್ಗಿ, ಶ್ರೀರಂಗ ಜೋಶಿ, ಡಾ.ಫಕೀರನಾಯ್ಕ ಗಡ್ಡಿಗೌಡರ, ವೀಣಾ ಕಿಡದಾಳ, ಗಣೇಶ ರಾಯ್ಕರ, ಸುರೇಶ ವಾಘಮೊಡೆ, ಸುಮಾ ಹಡಪದ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕನ್ನಡ ಅನ್ನದ ಭಾಷೆಯಾಗಬೇಕು. ಸರ್ಕಾರ ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಬೇಕು’ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.</p>.<p>ಸಪ್ತ ಸ್ವರ ಸಂಗೀತ ಕಲಾ ಬಳಗವು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಇಲ್ಲಿನ ಶಿವಬಸವನಗರದ ಎಸ್ಜಿಬಿಐಟಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಗಡಿ ಕನ್ನಡ ಸಾಂಸ್ಕೃತಿಕ ಉತ್ಸವ’, ಕವಿಗೋಷ್ಠಿ ಹಾಗೂ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕನ್ನಡದಲ್ಲಿ ಓದಿದವರಿಗಷ್ಟೆ ಸರ್ಕಾರಿ ಹಾಗೂ ಖಾಸಗಿ ರಂಗದಲ್ಲಿ ಉದ್ಯೋಗವಕಾಶ ಸಿಗುವಂತಾಗಬೇಕು. ಆಗ ಮಾತೃಭಾಷೆಯೂ ಉಳಿಯುತ್ತದೆ. ನಾಡಿನ ಬಗ್ಗೆ ಯುವಕ-ಯುವತಿಯರಲ್ಲಿ ಅಭಿಮಾನವೂ ಬೆಳೆಯುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಯಾವುದೇ ರಾಜ್ಯಗಳಲ್ಲೂ ಪ್ರಾದೇಶಿಕ ಭಾಷೆಗಳ ರಕ್ಷಣೆಗಾಗಿ ನಿಗಮ, ಪ್ರಾಧಿಕಾರಗಳಿಲ್ಲ. ಆದರೆ, ಕರ್ನಾಟಕದಲ್ಲಿ ಮಾತೃಭಾಷೆ ಹಾಗೂ ಗಡಿ ಸಂರಕ್ಷಣೆಗಾಗಿಯೆ ಸಂಸ್ಥೆಗಳು ಹುಟ್ಟಿಕೊಂಡಿರುವುದು ದುರಂತ. ಕನ್ನಡಿಗರಲ್ಲಿರುವ ಉದಾರತೆಯೇ ಇದಕ್ಕೆ ಕಾರಣ’ ಎಂದು ವಿಷಾದಿಸಿದರು.</p>.<p>ಸಾಹಿತಿ ಯ.ರು. ಪಾಟೀಲ ಮಾತನಾಡಿ, ‘ಮಕ್ಕಳು ಬಳಸಿದರೆ ಮಾತ್ರ ಯಾವುದೇ ಭಾಷೆಯ ಬೆಳವಣಿಗೆಯಾಗುತ್ತದೆ. ಹಾಗಾಗಿ ಮಕ್ಕಳಲ್ಲಿ ಕನ್ನಡದ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಪ್ರತಿ ಮನೆಯಿಂದ ಕನ್ನಡ ಉಳಿಸಿ, ಬೆಳೆಸುವ ಅಭಿಯಾನ ಆರಂಭವಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಶಿಕ್ಷಕ ಪಿ.ಎಸ್. ವಂಟಗೋಡಿ ಮಾತನಾಡಿ, ‘ನಾವೂ ಎಲ್ಲ ಭಾಷೆಗಳನ್ನೂ ಪ್ರೀತಿಸಬೇಕು. ಆದರೆ, ಕನ್ನಡವನ್ನು ಪೂಜಿಸಬೇಕು. ಪಾಶ್ಚಾತ್ಯ ಸಂಸ್ಕೃತಿಯಿಂದ ಹೊರ ಬಂದು ಕನ್ನಡ ಕಟ್ಟುವ ಕೆಲಸದಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಅಪ್ಪಾಸಾಹೇಬ ಅಲಿಬಾದಿ, ‘ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇದರೊಂದಿಗೆ, ಈ ಭಾಗದ ಜನರ ಬಹುದಿನಗಳ ಕನಸು ನನಸಾಗಿಸುತ್ತಿದ್ದಾರೆ. ಹೆಸರಷ್ಟೇ ಬದಲಾದರೆ ಸಾಲದು. ಈ ಭಾಗದ ಅಭಿವೃದ್ಧಿಗೂ ಸರ್ಕಾರ ಒತ್ತು ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ಬಾಳಾಸಾಹೇಬ ಉದಗಟ್ಟಿ, ಬಸವರಾಜ ಗಾರ್ಗಿ, ಶ್ರೀರಂಗ ಜೋಶಿ, ಡಾ.ಫಕೀರನಾಯ್ಕ ಗಡ್ಡಿಗೌಡರ, ವೀಣಾ ಕಿಡದಾಳ, ಗಣೇಶ ರಾಯ್ಕರ, ಸುರೇಶ ವಾಘಮೊಡೆ, ಸುಮಾ ಹಡಪದ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>