<p><strong>ಗೋಕಾಕ:</strong> ಜಂಗಮ ಸಮಾಜದ ಮಕ್ಕಳು ಪರೀಕ್ಷೆಗಳಲ್ಲಿ ಇನ್ನೂ ಹೆಚ್ಚೆಚ್ಚು ಅಂಕಗಳನ್ನು ಗಳಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸಿ, ರಾಜ್ಯ ಮತ್ತು ದೇಶಕ್ಕಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ಇತರರಿಗೆ ಮಾದರಿಯಾಗಲಿ ಎಂದು ಸಂಘದ ಗೋಕಾಕ ತಾಲ್ಲೂಕು ಘಟಕ ಅಧ್ಯಕ್ಷ ಪ್ರಕಾಶ ಕಂಬಿ ಆಶಿಸಿದರು.</p>.<p>ನಗರ ಹೊರವಲಯದ ಜ್ಞಾನ ಮಂದಿರದ ಆಧ್ಯಾತ್ಮ ಕೇಂದ್ರದಲ್ಲಿ ಗೋಕಾಕ ತಾಲ್ಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದಿಂದ ಶನಿವಾರ ನಡೆದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ 80ಕ್ಕಿಂತ ಅಧಿಕ ಅಂಕ ಗಳಿಸಿದ ಜಂಗಮ ಸಮಾಜದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸಹಕಾರಿ ಧುರೀಣ ಅಶೋಕ ಪೂಜೇರಿ ಮಾತನಾಡಿ, ಜಂಗಮ ಸಮಾಜದಲ್ಲಿ ಪ್ರತಿಭೆಗಳು ಸಾಕಷ್ಟಿದ್ದು ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಆರ್ಥಿಕ ನೆರವು ಬೇಕಿದೆ. ಈ ನಿಟ್ಟಿನಲ್ಲಿ ಜಂಗಮ ಕ್ಷೇಮಾಭಿವೃದ್ಧಿ ಸಂಘವು ಅಂಥವರಿಗೆ ನೆರವು ನೀಡುವ ಮೂಲಕ ಉತ್ತಮ ಕೆಲಸಮಾಡುತ್ತಿದೆ. ಅದಕ್ಕೆ ನಮ್ಮ ಸಹಾಯ ಸಹಕಾರ ಇದೆ ಎಂದರು.</p>.<p>ಕೇಂದ್ರದ ಧರ್ಮದರ್ಶಿನಿ ಸುವರ್ಣಾತಾಯಿ ಹೊಸಮಠ, ರವೀಂದ್ರ ಹಿರೇಮಠ, ಶೈಲಜಾ ಮಠದ, ಶಿಕ್ಷಕ ತೋರಣಗಟ್ಟಿ, ಜಂಗಮ ಸಮಾಜದ ಅನೇಕ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ಜಂಗಮ ಸಮಾಜದ ಮಕ್ಕಳು ಪರೀಕ್ಷೆಗಳಲ್ಲಿ ಇನ್ನೂ ಹೆಚ್ಚೆಚ್ಚು ಅಂಕಗಳನ್ನು ಗಳಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸಿ, ರಾಜ್ಯ ಮತ್ತು ದೇಶಕ್ಕಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ಇತರರಿಗೆ ಮಾದರಿಯಾಗಲಿ ಎಂದು ಸಂಘದ ಗೋಕಾಕ ತಾಲ್ಲೂಕು ಘಟಕ ಅಧ್ಯಕ್ಷ ಪ್ರಕಾಶ ಕಂಬಿ ಆಶಿಸಿದರು.</p>.<p>ನಗರ ಹೊರವಲಯದ ಜ್ಞಾನ ಮಂದಿರದ ಆಧ್ಯಾತ್ಮ ಕೇಂದ್ರದಲ್ಲಿ ಗೋಕಾಕ ತಾಲ್ಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದಿಂದ ಶನಿವಾರ ನಡೆದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ 80ಕ್ಕಿಂತ ಅಧಿಕ ಅಂಕ ಗಳಿಸಿದ ಜಂಗಮ ಸಮಾಜದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸಹಕಾರಿ ಧುರೀಣ ಅಶೋಕ ಪೂಜೇರಿ ಮಾತನಾಡಿ, ಜಂಗಮ ಸಮಾಜದಲ್ಲಿ ಪ್ರತಿಭೆಗಳು ಸಾಕಷ್ಟಿದ್ದು ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಆರ್ಥಿಕ ನೆರವು ಬೇಕಿದೆ. ಈ ನಿಟ್ಟಿನಲ್ಲಿ ಜಂಗಮ ಕ್ಷೇಮಾಭಿವೃದ್ಧಿ ಸಂಘವು ಅಂಥವರಿಗೆ ನೆರವು ನೀಡುವ ಮೂಲಕ ಉತ್ತಮ ಕೆಲಸಮಾಡುತ್ತಿದೆ. ಅದಕ್ಕೆ ನಮ್ಮ ಸಹಾಯ ಸಹಕಾರ ಇದೆ ಎಂದರು.</p>.<p>ಕೇಂದ್ರದ ಧರ್ಮದರ್ಶಿನಿ ಸುವರ್ಣಾತಾಯಿ ಹೊಸಮಠ, ರವೀಂದ್ರ ಹಿರೇಮಠ, ಶೈಲಜಾ ಮಠದ, ಶಿಕ್ಷಕ ತೋರಣಗಟ್ಟಿ, ಜಂಗಮ ಸಮಾಜದ ಅನೇಕ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>